Breaking News

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ

Spread the love

ಬೆಳಗಾವಿ: ಬೆಳ್ಳಂಬೆಳಗ್ಗೆ ಯರಗಟ್ಟಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ಕಾರಿನಲ್ಲಿದ್ದ ತಂದೆ-ಮಗ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ರಾಮದುರ್ಗ ತಾಲೂಕಿನ‌ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಮೃತ ವ್ಯಕ್ತಿ.

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಭೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕದಲ್ಲಿ ಮೃತ ಲಾರಿ ಚಾಲಕ ಲಾರಿಯನ್ನು ಸೈಡ್​​ಗೆ ಹಾಕಿದ್ದರು. ಸರಕಿಗೆ ಹಗ್ಗ ಕಟ್ಟಿ ಪ್ಯಾಕ್ ಮಾಡುತ್ತಿದ್ದ ಸಂದರ್ಭದಲ್ಲಿ ಕಾರು ನಿಯಂತ್ರಣ ‌ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿ ಚಾಲಕನಿಗೆ ಗುದ್ದಿದೆ. ಅಪಘಾತದ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇನ್ನೂ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಮರೇಗೌಡ ಮಾಲಿಪಾಟೀಲ (58) ಗೌಡಪ್ಪಗೌಡ ಮಾಲಿಪಾಟೀಲ (25) ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ‌. ವೀರಭದ್ರಗೌಡ ಡಬಿ (32), ಹನುಮಂತ ಬೆಟಗೇರಿ (23) ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ‌.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ