Breaking News

ಸಿಎಂ ಭೇಟಿಯಾದ ಮಹಾರಾಷ್ಟ್ರ ಶಾಸಕ ರಾಜು ಶೆಟ್ಟಿ: ಆಲಮಟ್ಟಿ ಜಲಾಶಯ ಎತ್ತರಿಸದಂತೆ ಮನವಿ

Spread the love

ಬೆಳಗಾವಿ: ಆಲಮಟ್ಟಿ ಜಲಾಶಯದಿಂದ ಕೊಲ್ಲಾಪುರ ಹಾಗೂ ಸಾತಾರಾ ಜಿಲ್ಲೆಯಲ್ಲಿ ಪ್ರವಾಹ ಹೆಚ್ಚಾಗುತ್ತಿದೆ. ಹೀಗಾಗಿ ಆಲಮಟ್ಟಿ ಜಲಾಶಯ ಎತ್ತರಿಸದಂತೆ ಕೊಲ್ಲಾಪುರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಹಾ ಶಾಸಕ ರಾಜು ಶೆಟ್ಟಿ ನೇತೃತ್ವದಲ್ಲಿ ಮನವಿ‌ ಸಲ್ಲಿಸಲಾಯಿತು.

ಮಹಾರಾಷ್ಟ್ರ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ, ಮಹಾರಾಷ್ಟ್ರದ ಸ್ವಾಭಿಮಾನಿ ಶೆತ್ಕರಿ ಸಂಘಟನೆ ಶಾಸಕ ರಾಜು ಶೆಟ್ಟಿ ನೇತೃತ್ವದಲ್ಲಿ ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಲಾಯಿತು. ಇಂದು ಕೊಲ್ಲಾಪುರದ ಕನ್ಹೇರಿ ಮಠದ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು‌.

ಆಲಮಟ್ಟಿ ಜಲಾಶಯದಿಂದ ಕೊಲ್ಲಾಪುರ ಹಾಗೂ ಸಾತಾರಾ ಜಿಲ್ಲೆಯಲ್ಲಿ ಪ್ರವಾಹ ಹೆಚ್ಚಾಗುತ್ತಿದೆ. ರೈತರ ಹೊಲ ಗದ್ದೆಗಳಲ್ಲಿ ನೀರು ನಿಂತು ಬೆಳೆ ನಾಶ ಆಗುತ್ತಿದೆ. ಈಗ ಮತ್ತೆ ಜಲಾಶಯ ಎತ್ತರಿಸಿದರೆ ಮತ್ತಷ್ಟು ಹಾನಿಯಾಗಲಿದೆ. ಹೀಗಾಗಿ ಕರ್ನಾಟಕ ಸರ್ಕಾರ ಆಲಮಟ್ಟಿ ಜಲಾಶಯ ಎತ್ತರಿಸಬಾರದು ಎಂದು ಮನವಿ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ