Breaking News

ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ

Spread the love

ಬೆಂಗಳೂರು/ಹುಬ್ಬಳ್ಳಿ: ರಾಜ್ಯದಲ್ಲಿ ಅಕಾಲಿಕ ಮಳೆ ಮುಂದುವರೆದಿದೆ. ಸೋಮವಾರ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆ ವ್ಯಾಪಕ ಮಳೆಯಾಗ್ತಿದೆ. ಇದರಿಂದಾಗಿ ಉಭಯ ನಗರಗಳಲ್ಲಿ ವಾಹನ ಸವಾರರು ಪರದಾಡುವಂತಾಯಿತು.

ಧಾರಾಕಾರ ಮಳೆಗೆ ವಾಹನ ಸವಾರರ ಪರದಾಟ: ಸಂಜೆ ಸಿಲಿಕಾನ್ ಸಿಟಿಯಲ್ಲಿ ವರುಣದ ಆರ್ಭಟಕ್ಕೆ ವಾಹನ ಸವಾರರು ತತ್ತರಿಸಿ ಹೋದರು. ಮೆಜೆಸ್ಟಿಕ್, ಮಲ್ಲೇಶ್ವರಂ, ಜಯನಗರ, ಶಿವಾಜಿನಗರ, ಯಶವಂತಪುರ, ಜಯನಗರ, ಜೆ ಪಿ ನಗರ ಸೇರಿದಂತೆ ಹೊಸೂರು, ಸರ್ಜಾಪುರ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಅರ್ಧಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆಯಾಗಿದ್ದರಿಂದ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಹುಬ್ಬಳ್ಳಿಯಲ್ಲಿ ಮನೆಯೊಳಗೆ ನುಗ್ಗಿದ ನೀರು: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸಹ ಧಾರಾಕಾರ ಮಳೆಯಾಗಿದೆ. ನಾಲ್ಕು ಗಂಟೆಗಳ ಕಾಲ ಬಿಟ್ಟು ಬಿಡದೆ ಸುರಿದ ಮಳೆಗೆ ವಾಣಿಜ್ಯ ನಗರಿ ತತ್ತರಿಸಿದೆ. ನಗರದ ಬಹುತೇಕ ಸ್ಲಂಗಳು ಹಾಗೂ ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳು ಕಂಗಾಲಾಗಿದ್ದಾರೆ. ಹಳೇ ಹುಬ್ಬಳ್ಳಿ, ದಾಜೀಬಾನ ಪೇಟೆ, ಕುಂಬಾರ ಓಣಿಯಲ್ಲಿ‌ ಮನೆಗಳಿಗೆ ನೀರು ನುಗ್ಗಿದೆ. ನೀರು ಹೊರಹಾಕಲು ಜನರು ‌ಹರಸಾಹಸಪಟ್ಟರು.‌ ನಗರದಲ್ಲಿ ವ್ಯಾಪಾರ ವಹಿವಾಟಿಗೂ ಮಳೆ ಅಡ್ಡಿಯನ್ನುಂಟು ಮಾಡಿದ್ರೆ, ವಾಹನ ಸವಾರರು ರಸ್ತೆ ಕಾಣದೆ ದಿಕ್ಕು ತೋಚದಂತಾಗಿದ್ದರು. ನಿರಂತರ ನಾಲ್ಕು ಗಂಟೆಗಳ ಕಾಲ ಮಳೆ ಸುರಿದ್ದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ