Breaking News

ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ‌ಬ್ಯಾನರ್‌ ತೆರವು; ಪಾಲಿಕೆ ವಿರುದ್ಧ ಕಾಂಗ್ರೆಸ್‌ ಮುಖಂಡರ ಆಕ್ರೋಶ

Spread the love

ಳ್ಳಾರಿ: ಜಿಲ್ಲೆಯಲ್ಲಿ ಪಾಲಿಕೆ ವತಿಯಿಂದ ರಾತ್ರೋರಾತ್ರಿ ಜೆಸಿಬಿ ಮೂಲಕ ಬ್ಯಾನರ್‌ ತೆರವುಗೊಳಿಸಿದಕ್ಕೆ ಮಹಾನಗರ ಪಾಲಿಕೆ ವಿರುದ್ಧ ಕಾಂಗ್ರೆಸ್‌ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಗರದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಪರವಾನಗಿ ಇಲ್ಲದೆ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಲಾಗಿತ್ತು. ಪಾಲಿಕೆ ಆಯುಕ್ತ ರುದ್ರೇಶ್ ನೇತೃತ್ವದಲ್ಲಿ ಸಂಗಮ್ಮ ಸರ್ಕಲ್​​, ರಾಯಲ್ ಸರ್ಕಲ್ ಸೇರಿದಂತೆ ಹಲವೆಡೆ ಬ್ಯಾನರ್ ತೆರವುಗೊಳಿಸಲಾಯಿತು. ಸಮಾವೇಶ ಹಿನ್ನೆಲೆ ಅತಿ ಹೆಚ್ಚು ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಬ್ಯಾನರ್ ತೆರವಿಗೆ ಕಾಂಗ್ರೆಸ್ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇವಲ ಕಾಂಗ್ರೆಸ್ ಬ್ಯಾನರ್ ತೆರವು, ಬಿಜೆಪಿ ಬ್ಯಾನರ್ ತೆರವು ಏಕಿಲ್ಲ? ಇಂತಹ ರಾಜಕೀಯ ಸರಿಯಿಲ್ಲ. ಬಿಜೆಪಿಯವರು ಪರವಾನಗಿ ಪಡೆದಿದ್ದಾರೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ