Breaking News

ಕೆರೆಯಲ್ಲಿ ಮುಳುಗಿದ್ದ ಮೀನುಗಾರ ಶವವಾಗಿ ಪತ್ತೆ

Spread the love

ಖಾನಾಪುರ ತಾಲೂಕಿನ ಕೆರವಾಡ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಕೆರೆ ಪಾಲಾಗಿದ್ದ ಮೀನುಗಾರನ ಶವ ಪತ್ತೆಯಾಗಿದೆ.

: ಹೌದು ಇದೇ ಅಕ್ಟೋಬರ್ 11ರಂದು ಕೆರವಾಡ ಕೆರೆಯಲ್ಲಿ ಮೀನು ಹಿಡಿಯಲು ಬಲೆ ಹಾಕಲು ಹೋಗಿದ್ದ ವೇಳೆ ಕೆರೆಯಲ್ಲಿ ಮುಳುಗಿದ್ದ. ಘಟನಾ ಸ್ಥಳಕ್ಕೆ ನಂದಗಡ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಆತನ ಶೋಧ ಕಾರ್ಯ ನಡೆಸಿದ್ದರು.

 

ಸ್ಥಳಕ್ಕೆ ತಹಶೀಲ್ದಾರ್ ಪ್ರವೀಣ ಜೈನ್ ಕೂಡ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದರು. ಬುಧವಾರ ಕೆರೆಯಲ್ಲಿ ಆತನ ಶವವನ್ನು ಹೊರ ತೆಗೆಯುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಗ್ರಾಮದ 26 ವರ್ಷದ ಮಂಜುನಾಥ ತುಕಾರಾಂ ವಾಣಿ ಮೃತ ಮೀನುಗಾರ. ಈ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

Spread the loveಕೊಪ್ಪಳ, ನವೆಂಬರ್​ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ