Breaking News

24 ಗಂಟೆಗಳಲ್ಲಿಯೇ ಮಳೆ ಹಾನಿ ಪರಿಹಾರ; ಮುಖ್ಯಮಂತ್ರಿ ಮಹತ್ವದ ಘೋಷಣೆ

Spread the love

ಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೀವ ಹಾನಿಯ ಜೊತೆಗೆ ಹೊಲಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆ ನಷ್ಟವೂ ಸಂಭವಿಸಿದೆ. ಇದರ ಜೊತೆಗೆ ರಸ್ತೆಗಳು ಸಹ ಕಿತ್ತು ಹೋಗಿವೆ.

 

ಇದೀಗ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಆಯ್ದ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ 24 ಗಂಟೆಗಳೊಳಗಾಗಿ ಪರಿಹಾರ ವಿತರಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

 

ಅಲ್ಲದೆ, ರಾಜ್ಯದಲ್ಲಿ ಮಳೆಯಿಂದಾಗಿ ಮೃತಪಟ್ಟ 13 ಮಂದಿಯ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಲಾಗಿದೆ ಎಂದು ತಿಳಿಸಿರುವ ಮುಖ್ಯಮಂತ್ರಿಗಳು, ಯಾವುದೇ ವಿಳಂಬ ಮಾಡದೆ ತ್ವರಿತವಾಗಿ ಮಳೆ ಹಾನಿ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

Spread the loveಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ