Breaking News

24 ಗಂಟೆಗಳಲ್ಲಿಯೇ ಮಳೆ ಹಾನಿ ಪರಿಹಾರ; ಮುಖ್ಯಮಂತ್ರಿ ಮಹತ್ವದ ಘೋಷಣೆ

Spread the love

ಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೀವ ಹಾನಿಯ ಜೊತೆಗೆ ಹೊಲಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆ ನಷ್ಟವೂ ಸಂಭವಿಸಿದೆ. ಇದರ ಜೊತೆಗೆ ರಸ್ತೆಗಳು ಸಹ ಕಿತ್ತು ಹೋಗಿವೆ.

 

ಇದೀಗ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಆಯ್ದ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ 24 ಗಂಟೆಗಳೊಳಗಾಗಿ ಪರಿಹಾರ ವಿತರಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

 

ಅಲ್ಲದೆ, ರಾಜ್ಯದಲ್ಲಿ ಮಳೆಯಿಂದಾಗಿ ಮೃತಪಟ್ಟ 13 ಮಂದಿಯ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಲಾಗಿದೆ ಎಂದು ತಿಳಿಸಿರುವ ಮುಖ್ಯಮಂತ್ರಿಗಳು, ಯಾವುದೇ ವಿಳಂಬ ಮಾಡದೆ ತ್ವರಿತವಾಗಿ ಮಳೆ ಹಾನಿ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Spread the love ಬೀದರ್: ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ  ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು  ಅಸ್ವಸ್ಥಗೊಂಡಿರುವ ಆಘಾತಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ