Breaking News

ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ: ಬೊಮ್ಮಾಯಿ, ಬಿಎಸ್‌ವೈಗೆ ನಿಯೋಗದ ಮನವಿ

Spread the love

ಚಿತ್ರದುರ್ಗ: ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೂರ್ತಿ ಮುರುಘಾ ಶರಣರು ಬಂಧನದಲ್ಲಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಮುಂದಾಗಬೇಕು ಎಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.

 

ಮಾಜಿ ಸಚಿವ ಎಚ್‌.ಏಕಾಂತಯ್ಯ, ವಿಧಾನಪರಿಷತ್‌ ಸದಸ್ಯ ಕೆ.ಎಸ್‌.ನವೀನ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಜನರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದೆ. ಶಾಸಕ ಬಿ.ಎಸ್.ಯಡಿಯೂರಪ್ಪ ಅವರೊಂದಿಗೂ ಚರ್ಚಿಸಿದೆ.

‘ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಮುರುಘಾ ಮಠದ ದೈನಂದಿನ ಧಾರ್ಮಿಕ ಕೈಂಕರ್ಯ ಹಾಗೂ ಆಡಳಿತಾತ್ಮಕ ಚಟುವಟಿಕೆಗೆ ತೊಂದರೆ ಆಗುತ್ತಿದೆ. ಮುರುಘರಾಜೇಂದ್ರ ಪೀಠದ ಉಳಿವಿಗೆ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ನೇಮಕ ಮಾಡಬೇಕು ಎಂಬ ಮನವಿ ಮಾಡಲಾಗಿದೆ’ ಎಂದು ಸಮುದಾಯದ ಮುಖಂಡ ಎಸ್‌.ಷಣ್ಮುಖಪ್ಪ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ