Breaking News

ಪುತ್ತೂರು: ಸರಣಿ ಕಳ್ಳತನ ಪ್ರಕರಣ ಅಂತಾರಾಜ್ಯ ಕಳ್ಳನ ಸೆರೆ

Spread the love

ಪುತ್ತೂರು: ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್‌ ನಿವಾಸಿ ಆರೋಪಿ ಮಹಮ್ಮದ್‌ ಕೆ.ಯು. (42)ಬಂಧಿತ ಆರೋಪಿ.

ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಿಸರದ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್‌ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆರೋಪಿಯು ಕೊಣಾಜೆ, ವಿಟ್ಲ,
ಬಂಟ್ವಾಳ, ಪುಂಜಾಲಕಟ್ಟೆ ಪರಿಸರಗಳಲ್ಲಿ ಕಳ್ಳತನ ನಡೆಸಿರುವುದು ವಿಚಾ ರಣೆಯ
ವೇಳೆ ಬೆಳಕಿಗೆ ಬಂದಿದೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯ ದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ