ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ.
ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ನಟ ಚೇತನ್ ಕಿಡಿ ಕಾರಿದ್ದಾರೆ
ಭೂತಕೋಲ ಹಿಂದೂ ಸಂಸ್ಕೃತಿ ಎಂದು ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಅಲ್ಲಗೆಳೆದಿದ್ದಾರೆ. ಈ ಬಗ್ಗೆ ನೆಟ್ಟಿಗರು ನಟ ಚೇತನ್ ಪ್ರಚಾರಕ್ಕಾಗಿ ಈ ವಿವಾದವನ್ನು ಎತ್ತಿದ್ದಾರೆ ಎಲ್ಲೆಡೆ ಕಿಡಿಕಾರಿದ್ದಾರೆ., ಈ ಬಗ್ಗೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ