Breaking News

ವಿರೋಧ ಮಧ್ಯೆಯೂ ಬೆಳಗಾವಿಯಲ್ಲಿ ಗಣೇಶ ಮಂದಿರ ಮುಂಭಾಗದ ಶೆಡ್ ತೆರವು

Spread the love

ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು. ಒತ್ತುವಾರಿಯಾಗಿದ್ದ ಗಣೇಶ ಮಂದಿರ ಮುಂಭಾಗದ ತಗಡಿನ ಶೆಡ್ ತೆರವಿಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್‍ರ ಮನವಲಿಕೆ ಹಿನ್ನೆಲೆ ದೇವಸ್ಥಾನ ಮಂಡಳಿಯವರು ಒಪ್ಪಿಗೆ ಸೂಚಿಸಿದರು.

: ಹೌದು ಬೆಳಗಾವಿಯ ಬಸವೇಶ್ವರ ವೃತ್ತದ ಬಳಿಯ ಗಣೇಶ ದೇವಸ್ಥಾನ ಎದುರು ಹಾಕಲಾಗಿದ್ದ ತಗಡಿನ ಶೆಡ್‍ನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ರಾತ್ರಿ ತೆರವು ಮಾಡಿದ್ದಾರೆ. ದೇವಸ್ಥಾನ ಆಡಳಿತ ಮಂಡಳಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಇವರನ್ನು ನಗರಸೇವಕರಾದ ಗಿರೀಶ್ ಧೋಂಗಡಿ, ನಿತಿನ್ ಜಾಧವ್ ಮತ್ತು ಪಾಲಿಕೆ ಸಿಬ್ಬಂದಿ ಮನವಲಿಸಿದರು.

ಶಾಸಕ ಅಭಯ್ ಪಾಟೀಲ್ ಜೊತೆ ದೂರವಾಣಿಯಲ್ಲಿ ಮಾತನಾಡಿಸಿ ಮನವೊಲಿಕೆ ಮಾಡಲಾಗಿದೆ. ದೇವಸ್ಥಾನ ಕಟ್ಟಡಕ್ಕೆ ಯಾವುದೇ ರೀತಿ ಹಾನಿಯಾಗದೇ ಶೆಡ್ ತೆರವಿನ ಭರವಸೆ ಹಿನ್ನೆಲೆ ದೇವಸ್ಥಾನ ಎದುರುಗಿನ ಶೆಡ್ ತೆರವಿಗೆ ದೇವಸ್ಥಾನ ಆಡಳಿತ ಮಂಡಳಿ ಸಮ್ಮತಿ ಸೂಚಿಸಿತು. ನಂತರ ದೇವಸ್ಥಾನ ಮಂಡಳಿಯವರು ತಾವೇ ಸ್ವತಃ ತಗಡಿನ ಶೆಡ್‍ನ್ನು ತೆಗೆಯಲು ಮುಂದಾದರು.

ಬಸವೇಶ್ವರ ವೃತ್ತದ ಬಳಿ ಸರ್ವೇ ನಂಬರ್ 2026ರಲ್ಲಿ ಆಗಿದ್ದ ಒತ್ತುವರಿ ತೆರವು ಮಾಡಲಾಗಿದೆ. ಮೊದಲು ಮುಸ್ಲಿಂ ಸಮುದಾಯದ ಮನೆಗಳ ತೆರವು ಮಾಡಿದ್ದರು. ಇನ್ನು ಗಣೇಶ ದೇವಸ್ಥಾನ ಎದುರು ಸುಮಾರು ಹತ್ತು ಅಡಿ ಜಾಗ ಸಹ ಒತ್ತುವರಿ ಆಗಿತ್ತು. ಸುಮಾರು ಹತ್ತು ಅಡಿ ಜಾಗದಲ್ಲಿ ದೇವಸ್ಥಾನ ಆಡಳಿತ ಮಂಡಳಿ ತಗಡಿನ ಶೀಟ್ ಅಳವಡಿಸಿತ್ತು. ದೇವಸ್ಥಾನ ಎದುರು ನಿರ್ಮಿಸಲಾಗಿದ್ದ ಶೆಡ್ ತೆರವಿಗೆ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡುಸ್ಕರ್ ವಿರೋಧ ವ್ಯಕ್ತಪಡಿಸಿದ್ದರು. ಒಂದೆಡೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಮತ್ತೊಂದೆಡೆ ಮುಸ್ಲಿಂ ಸಮುದಾಯದ ಜನ ಜಮಾವಣೆಗೊಂಡಿದ್ರು. ಈ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣ ಆಗಿತ್ತು.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ