Breaking News

ಭಾರಿ ಮಳೆಗೆ ಉಕ್ಕಿ ಹರಿಯುತ್ತಿವೆ ಹಳ್ಳಗಳು

Spread the love

ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಉಕ್ಕಿ ಬಂದ ಹಳ್ಳದಿಂದ ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್ ಆಗಿದೆ‌. 108 ವಾಹನ ಅಂಬುಲೆನ್ಸ್ ವಾಹನ ಸಂಚಾರಕ್ಕೂ ಹಳ್ಳ ಅಡ್ಡಿಯಾಗಿದೆ. ಕೆಳ ಹಂತದ ಸೇತುವೆ ಮೇಲೆ ಹಳ್ಳದ ನೀರು ಹರಿಯುತ್ತಿರು ವದರಿಂದ 108 ಸಿಬ್ಬಂದಿ ಪರದಾಡಬೇಕಾದ ಪರಿಸ್ಥಿತಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಘಟನೆ ನಡೆದಿದೆ‌.

ಭಾರೀ ಮಳೆಯಿಂದ ಹಳ್ಳದ ನೀರು ತುಂಬಿ ಹರಿಯುವದಿಂದ ಸಂಪರ್ಕ ಕಟ್ ಆಗಿದೆ. ತಾಳಿಕೋಟಿ ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್ ಆಗಿದೆ. ಬೆಳಿಗ್ಗೆಯಿಂದ ರಸ್ತೆ ಸಂಪರ್ಕ ಬಂದ ಆಗಿದ್ದು ಜಮೀನುಗಳಿಗೆ ಹೋಗಲು ರೈತರ ಪರದಾಡಬೇಕಾಗಿದೆ. ತಾಳಿಕೋಟಿ ಚವನಭಾವಿ ನಾಲತವಾಡ ಬಸ್ ಸಂಪರ್ಕ ಕೂಡ ಬಂದ್ ಆಗಿದ್ದರಿಂದ ಶಾಲೆಗೆ ತೆರಳಲು ವಿದ್ಯಾರ್ಥಿಗಳ ಪರದಾಟ, ಗ್ರಾಮಸ್ಥರು ಹೈರಾಣ ಆಗುತ್ತಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ