Breaking News
Home / ರಾಜಕೀಯ / ತೋಟದ ರಸ್ತೆಯಲ್ಲಿ ಯಮಸ್ವರೂಪಿ‌ ತಗ್ಗಗುಂಡಿಗಳು

ತೋಟದ ರಸ್ತೆಯಲ್ಲಿ ಯಮಸ್ವರೂಪಿ‌ ತಗ್ಗಗುಂಡಿಗಳು

Spread the love

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಶಿಂಧೆ ತೋಟದ ರಸ್ತೆಗಳು ಹದಗೆಟ್ಟು ಹೋಗಿವೆ.ರಸ್ತೆಗಳು ಹದಗೆಟ್ಟ ಪರಿಣಾಮ ಗ್ರಾಮದ ಶಿಂಧೆ ತೋಟದ ಸುಮಾರು 30 ಮನೆಗಳು ಸಂಪರ್ಕ ಕಡಿತವಾಗಿವೆ.

ಮಳೆಗಾಲ ಪ್ರಾರಂಭವಾದರೆ ಸಾಕು ಶಿಂಧೆ ತೋಟದ ಜನರ ಪರಿಸ್ಥಿತಿ ಹೇಳತೀರದಾಗಿದೆ. 2 ಅಡಿಯಷ್ಟು ದೊಡ್ದ ದೊಡ್ಡ ಗುಂಡಿಗಳು,ಆ ಗುಂಡಿಗಳಲ್ಲಿ ನೀರು ಸಂಗ್ರಹ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಇದರಿಂದಾಗಿ ದಿನಪ್ರತಿ ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ಜಾರಿ ಬೀಳುವುದು ಸಹಜವಾಗಿದೆ. ಮಹಿಳೆಯರು, ವೃಧ್ಧರು ರಸ್ತೆ ಮೇಲೆ ಸಂಚರಿಸಲು ಪರದಾಡುವ ದುಸ್ಥಿತಿ ನಿರ್ಮಾಣವಾಗಿದೆ.

ಈ ಹದಗೆಟ್ಟ ರಸ್ತೆಯಿಂದಾಗಿ ಶಿಂಧೆ ತೋಟದ ಮನೆಗಳಿಗೆ ಬೇರೆ ಊರುಗಳಿಂದ ಬರುವ ಸಂಬಂಧಿಕರು, ಅತಿಥಿಗಳು ಈ ರಸ್ತೆಯಲ್ಲಿನ ಗುಂಡಿಗಳನ್ನು ನೋಡಿ ಮತ್ತೆ ವಾಪಸ್ಸ ಹೋಗುತ್ತಿದ್ದಾರೆ ಎಂದು ಶಿಂಧೆ ತೋಟದ ಜನರು‌ ಅಳಲುತೋಡಿಕೊಳ್ಳುತ್ತಿದ್ದಾರೆ. ಶಾಸಕ ದುರ್ಯೋಧನ ಐಹೊಳೆಯವರು ಈ ರಸ್ತೆ ಬಗ್ಗೆ ಗಮನಹರಿಸಿ ರಸ್ತೆ ನಿರ್ಮಾಣ ಮಾಡಿಕೊಡಿ ಎಂದು ಶಿಂಧೆ ತೋಟದ ಜನರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ