Breaking News

ಇಂದಿನಿಂದ 3 ದಿನ `ಕಿತ್ತೂರು ಉತ್ಸವ’

Spread the love

ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ.

ಇಂದು ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸಲಿದ್ದು, ಅಕ್ಟೋಬರ್ 23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ.

 

ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ ರಾಜಾ ಮಲ್ಲಸರ್ಜ ವೇದಿಕೆ ಹಾಗೂ ಸಂಗೊಳ್ಳಿ ರಾಯಣ್ಣ ವೇದಿಕೆಗಳಲ್ಲಿ ಮೂರು ದಿನಗಳವರೆಗೆ ವೈದ್ಯವಿದ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 24 ರಂದು ಮಹಿಳೆಯರಿಗೆ ಮೀಸಲಿಡಲಾಗಿದೆ. ಮಹಿಳಾ ಸಬಲೀಕರಣ ಬಗ್ಗೆ ವಿಚಾರಗೋಷ್ಠಿಗಳು ಜರುಗಲಿವೆ.


Spread the love

About Laxminews 24x7

Check Also

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಶಾಸಕ ಅಭಯ ಪಾಟೀಲ್ ಗೆ ಸುಪ್ರೀಂ ಕೋರ್ಟ್ ನೋಟಿಸ್

Spread the loveದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ