Breaking News

ಸೂರ್ಯಗ್ರಹಣ: ಹಲವೆಡೆ ದೇವರ ದರ್ಶನ ಬಂದ್‌

Spread the love

ಬೆಳಗಾವಿ: ಕೇತುಗ್ರಸ್ಥ ಖಂಡಗ್ರಾಸ (ಖಗ್ರಾಸ) ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಮಂಗಳವಾರ ಮಧ್ಯಾಹ್ನದಿಂದ ಮೂರ್ತಿಗಳ ದರ್ಶನ ಬಂದ್‌ ಮಾಡಲಾಯಿತು. ದೀಪಾವಳಿ ಹಬ್ಬದ ಕಾರಣ ದೇವಸ್ಥಾನಗಳನ್ನು ಮುಚ್ಚಲಿಲ್ಲ.

ಆದರೆ, ಮೂರ್ತಿಗಳ ಮೇಲೆ ಬಿಲ್ವಪತ್ರಿ, ಶಾಲುಗಳನ್ನು ಹೊದಿಸಿ ಮರೆ ಮಾಟಲಾಯಿತು.

ಸಂಜೆ 4.30ಕ್ಕೆ ಸರಿಯಾಗಿ ಬೆಳಗಾವಿಯಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ ಎಂದು ಅರ್ಚಕರು ಮಾಹಿತಿ ನೀಡಿದರು. ಸೋಮವಾರವೇ ಹಲವು ದೇವಸ್ಥಾನಗಳಲ್ಲಿ ಗ್ರಹಣ ಮಾಹಿತಿ ಹಾಗೂ ದೋಷ ನಿವಾರಣಾ ವಿಧಾನಗಳ ಬಗ್ಗೆ ವಿವರ ನೀಡಲಾಯಿತು. ಹೀಗಾಗಿ, ಮಂಗಳವಾರ ನಸುಕಿನಲ್ಲೇ ಹಲವರು ದೇವರ ಪೂಜೆ ನೆರವೇರಿಸಿದರು.

‘ದಕ್ಷಿಣ ಕಾಶಿ’ ಎಂದೇ ಹೆಸರಾದ ಇಲ್ಲಿನ ಕಪಿಲೇಶ್ವರ ಮಂದಿರದಲ್ಲಿ ಬೆಳಿಗ್ಗೆಯಿಂದ ಜನಜಂಗುಳಿ ಕಂಡುಬಂತು. ಗ್ರಹಣ ಆರಂಭವಾಗುವ ಮುನ್ನವೇ ಅರ್ಚಕರು ಪೀತಾಂಬರ ಹೊದಿಸಿ ಶಿವನ ಮೂರ್ತಿಯನ್ನು ಮುಚ್ಚಿದರು. ನಂತರ ಮಹಾಮೃತ್ಯುಂಜಯ ಹೋಮ ಆರಂಭಿಸಿದರು.

ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಚಿಂಚಿಲಿ ಮಾಯಕ್ಕ ದೇವಸ್ಥಾನದಲ್ಲಿ ದೇವರ ದರ್ಶನ ಮುಂದುವರಿಸಿದ್ದರೂ ಪೂಜೆ, ಪ್ರಸಾದ, ಆರತಿ ಬಂದ್‌ ಮಾಡಲಾಯಿತು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ