Breaking News

ಬೆಳಗಾವಿ ಪ್ರವೇಶಕ್ಕೆ ಶಿವಸೇನೆ ಕಾರ್ಯಕರ್ತರ ಯತ್ನ: ತಡೆದ ಪೊಲೀಸ್ ಪಡೆ

Spread the love

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಗಡಿಭಾಗದಿಂದ ರಾಜ್ಯ ಪ್ರವೇಶಿಸಲು ಯತ್ನಿಸಿದ ಮಹಾರಾಷ್ಟ್ರದ ಶಿವಸೇನೆಯ ಕಾರ್ಯಕರ್ತರನ್ನು ಸೋಮವಾರ ತಾಲ್ಲೂಕಿನ ಕೊಗನೊಳಿ ಚೆಕ್ ಪೋಸ್ಟ್ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದ ರಾಜ್ಯ ಪೊಲೀಸರು ಅವರನ್ನು ಮರಳಿ ಕಳುಹಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ರ‍್ಯಾಲಿ ಆಯೋಜಿಸಲಾಗುವುದೆಂದು ಘೋಷಿಸಿ, ರಾಜ್ಯ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಶಿವಸೇನೆಯ ಕೊಲ್ಹಾಪುರ ಜಿಲ್ಲೆಯ ಅಧ್ಯಕ್ಷ ವಿಜಯ ದೇವಣೆ ಮತ್ತು ಕಾರ್ಯಕರ್ತರನ್ನು ಗಡಿಯಲ್ಲಿಯೇ ಪೊಲೀಸರು ತಡೆದರು.

ಕೂಡಲೇ ಶಿವಸೇನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಕುಳಿತುಕೊಂಡರು. ನಂತರ ಪಕ್ಕದ ದೂಧಗಂಗಾ ನದಿಯಲ್ಲಿ ಇಳಿದು, ‘ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನದಿಯು ಹರಿಯುತ್ತದೆ. ಇದಕ್ಕೆ ನಮಸ್ಕರಿಸಿದ್ದು ನಾವು ಬೆಳಗಾವಿಯನ್ನು ತಲುಪಿದಂತಾಗಿದೆ’ ಎಂದು ವಿಜಯ ದಾವಣೆ ಹೇಳಿದರು.


Spread the love

About Laxminews 24x7

Check Also

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ– -ಎಸಿಪಿ ನಾರಾಯಣ ಬರಮನಿ

Spread the love ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ