Breaking News

ಟಿಕೆಟ್ ತಪಾಸಣಾ ಅಧಿಕಾರಿ ಬಂದ ಕೆಲವೇ ಕ್ಷಣಗಳಲ್ಲಿ ಕಂಡಕ್ಟರ್​ ಹೃದಯಾಘಾತದಿಂದ ಸಾವು

Spread the love

ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಹೊರಟಿದ್ದ ಬಸ್​ನಲ್ಲಿ ಹೃದಯಾಘಾತದಿಂದ ಕಂಡಕ್ಟರ್​ ಸಾವಿಗೀಡಾಗಿರುವ ಘಟನೆ ನಡೆದಿದೆ.

ಮಹೇಶ್​ ಹೂಗಾರ ಎಂಬ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾದವರು. ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು.‌ ತಪಾಸಣಾ ಅಧಿಕಾರಿ ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದ ಹಾಗೆ ಕಂಡಕ್ಟರ್ ಮಹೇಶ್​ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ, ಚಾಲಕ ಹರಸಾಹಸ ಮಾಡಿ ಕಿಮ್ಸ್​ಗೆ ತರುವಷ್ಟರಲ್ಲಿಯೇ ನಿರ್ವಾಹಕ ಸಾವಿಗೀಡಾಗಿದ್ದಾರೆ.

 

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಈಗಾಗಲೇ ಹಲವು ಸಮಸ್ಯೆಗಳನ್ನು ಸಿಬ್ಬಂದಿ ಎದುರಿಸುತ್ತಿದ್ದು, ಪ್ರತಿ ಕ್ಷಣವೂ ಆತಂಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದೇ ಇವತ್ತಿನ ದುರ್ಘಟನೆಗೆ ಕಾರಣವಾಗಿದೆ.


Spread the love

About Laxminews 24x7

Check Also

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!

Spread the love ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ