Breaking News

ಶಾಸಕ ರೇಣುಕಾಚಾರ್ಯ ತಮ್ಮನ ಮಗನ ಸಾವು ಪ್ರಕರಣಕ್ಕೆ ಮೆಗಾ ಟ್ವಿಸ್ಟ್:‌ ಅ. 30 ರಂದು ಆತನಿಗೆ ಒಂದೇ ನಂಬರ್‌ನಿಂದ 10 ಸಲ ಕರೆ!

Spread the love

ದಾವಣಗೆರೆ: ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್‌ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ.

ಚಂದ್ರಶೇಖರ್‌ ನದ್ದ ಅಪಘಾತವಾಗಿಲ್ಲ, ಅದೊಂದು ಯೋಜಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿರುವ ಹಿನ್ನೆಲೆ ಪ್ರಕಣ ದಾಖಲಿಸಿಕೊಂಡಿರುವ ಹೊನ್ನಾಳಿ ಪೊಲೀಸರು ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ ಚಂದ್ರಶೇಖರ್‌ ನಾಪತ್ತೆಯಾದ ದಿನ. ಅ. 30 ರಂದು ಆತನ ಮೊಬೈಲ್‌ ಗೆ ಒಂದೇ ನಂಬರ್‌ ನಿಂದ 10ಕ್ಕೂ ಹೆಚ್ಚು ಸಲ ಕರೆ ಬಂದಿದೆ ಎಂದು ತಿಳಿದುಬಂದಿದೆ.

 

ಚಂದ್ರಶೇಖರ್‌ ಮೊಬೈಲ್‌ ಪರಿಶೀಲನೆ ನಡೆಸಿದಾಗ ಕಾಲ್‌ ಹಿಸ್ಟ್ರಿಯಲ್ಲಿ ಗೊತ್ತಾಗಿದೆ. ಅದು ಕೂಡ 10 ಗಂಟೆ ವೇಳೆ ಅಂದು ರಾತ್ರಿ 10 ಗಂಟೆ ವೇಳೆ ಚಂದ್ರಶೇಖರ್‌ ಗೌರಿಗದ್ದೆಯಲ್ಲಿದ್ದ. ಈ ವೇಳೆ ಕೊಪ್ಪದಿಂದ ಆತನಿಗೆ ಫೋನ್‌ ಕಾಲ್‌ ಸತತವಾಗಿ ಬಂದಿದ್ದಾಗಿ ತನಿಖೆ ವೇಳೆ ತಿಳಿದುಬಂದಿದೆ. ಈ ಕಾಲ್‌ ಬಂದಿರುವುದು ಚಂದ್ರಶೇಖರ್‌ ಸಾವಿಊ ಲಿಂಕ್‌ ಆಗಿದಿಯಾ? ಎಂಬ ಅನುಮಾನ ವ್ಯಕ್ತವಾಗಿದೆ.


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ