Breaking News

ರಾಜ್ಯದಲ್ಲಿ ಸಾಲ ಕಟ್ಟದ ರೈತರ `ಆಸ್ತಿ ಜಪ್ತಿ’ ತಡೆಯಲು ಶೀಘ್ರವೇ ಕಾನೂನು ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಹಕಾರ ಸಂಘಗಳು, ಬ್ಯಾಂಕ್ ಗಳಿಗೆ ರೈತರು ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡದಂತೆ ಶೀಘ್ರವೇ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಹೆಬ್ಬಾಳದ ಜಿಕೆವಿಕೆಯಲ್ಲಿ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಹಕಾರ ಸಂಘಗಳು, ಬ್ಯಾಂಕ್ ಗಳಿಂದ ರೈತರು ಸಾಲ ಪಡೆದು ಕೆಲವೊಮ್ಮೆ ಮರು ಪಾವತಿ ಮಾಡಲು ಆಗುವುದಿಲ್ಲ. ಇಂತಹ ಸಮಯದಲ್ಲಿ ರೈತರ ಆಸ್ತಿ ಜಪ್ತಿ ಆಗುವುದನ್ನು ತಡೆಯಲು ಕಾನೂನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ರೈತರ ಸಾಲ ಮರುಪಾವತಿ ಆಗದಿದ್ದರೆ ಆಸ್ತಿ ಜಪ್ತಿ ಮಾಡದೇ ಸಮಯಾವಕಾಶ ನೀಡಬೇಕು ಎಂದು ಸಹಕಾರ ಮತ್ತು ಇತರೆ ಇಲಾಖೆಗಳಿಗೆ ಸೂಚನೆ ನೀಡಲಾಗಿದ್ದು, ಈ ಸಂಬಂಧ ಕಾನೂನು ತಜ್ಞರ ಜೊತೆಗೆ ಚರ್ಚೆ ಮಾಡಿ ಸಾಲ ಕಟ್ಟದ ರೈತರ ಆಸ್ತಿ ಜಪ್ತಿ ತಡೆಯಲು ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ