Breaking News

ಮದ್ಯದಂಗಡಿ ಕಳವು ಪ್ರಕರಣದಲ್ಲಿ ಮಾಲೀಕನೇ ಕಳ್ಳ!

Spread the love

ಚಿಕ್ಕಬಳ್ಳಾಪುರ: ನಗರ ಹೊರವಲಯದ ಗೋಲ್ಡನ್ ಬಾರಿನಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ ಮಾಲೀಕ ಹಾಗೂ ಅತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಏಪ್ರಿಲ್ 30ರ ರಾತ್ರಿ ನಗರ ಹೊರವಲಯದ ಗೋಲ್ಡನ್ ಬಾರಿನ ಸಿಸಿಟಿವಿ ಒಡೆದು ಹಾಕಿ, ಬಾರಿನ ಹಿಂಭಾಗದ ಗೋಡೆಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿತ್ತು. ಈ ಸಂಬಂಧ ಮೇ 1ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಬಾರ್ ಮಾಲೀಕ, ನಗರಸಭೆ ಸದಸ್ಯ ದೀಪಕ್ ಹಾಗೂ ಆತನ ಸಹಚರರೇ ಕಳ್ಳತನದ ರೂವಾರಿಗಳು ಎಂಬ ಅಂಶ ಬೆಳಕಿಗೆ ಬಂದಿದೆ.

ಲಾಕ್‍ಡೌನ್ ಸಮಯದಲ್ಲಿ ಮೂಲ ಬೆಲೆಗಿಂತ ಹತ್ತು ಪಟ್ಟು ಹೆಚ್ಚಳಕ್ಕೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿ ಹಣ ಗಳಿಸಲು ಮಾಲೀಕ, ಆತನ ಸಹಚರರು ಸಂಚು ರೂಪಿಸಿದ್ದರು. ಇದರಂತೆ ಬಾರ್ ಗೋಡೆಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಿದ್ದರು. ತದನಂತರ ತಮ್ಮ ಬಾರ್ ಕಳ್ಳತನ ಆಗಿದೆ ಎಂದು ಕಥೆ ಕಟ್ಟಿ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಹಾಗೂ ಅಬಕಾರಿ ಇಲಾಖಾಧಿಕಾರಿಗಳಿಗೆ ಮಂಕು ಬೂದಿ ಎರಚಲು ಹೋದ ಮಾಲೀಕ ಈಗ ಜೈಲು ಸೇರುವಂತಾಗಿದೆ. ಲಾಕ್‍ಡೌನ್ ವೇಳೆ ಜಿಲ್ಲೆಯ 4 ಕಡೆ ಸಹ ಮದ್ಯದಂಗಡಿಗಳ ಕಳವು ಪ್ರಕರಣಗಳು ನಡೆದಿದೆ. ಈ ಪ್ರಕರಣ ಇದೀಗ ಬಾರ್ ಮಾಲೀಕರ ಮೇಲೆಯೇ ಅನುಮಾನ ಪಡುವಂತೆ ಮಾಡಿದೆ. ಪ್ರಕರಣಕ್ಕೆ ಸಂಬಧಿಸಿದಂತೆ ಬಂಧಿತರಿಂದ 07 ಕ್ರೇಟ್ ಮದ್ಯ, ನಗದು ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Spread the loveಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿಯೋರ್ವ ತಹಶೀಲ್ದಾರ್  ಹೆಸರು ಉಲ್ಲೇಖಿಸಿ ಡೆತ್ ನೋಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ