Breaking News

ಅನ್ಯಕೋಮಿನ ಯುವಕನ ಜತೆ ಪ್ರೀತಿ; ಮಗಳನ್ನೇ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿದ ತಂದೆ!

Spread the love

ಳ್ಳಾರಿ: ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದಲ್ಲಿ ನಡೆದಿದೆ.

ಕುಡುತಿನಿ ಪಟ್ಟಣದ ಬುಡ್ಗ ಜಂಗಮ ಕಾಲನಿ ನಿವಾಸಿ ಓಂಕಾರಗೌಡನೇ ತನ್ನ ಮಗಳನ್ನು ಕೊಲೆ ಮಾಡಿದ ತಂದೆ.

ಓಂಕಾರಗೌಡನ ಮಗಳು ಹೈಸ್ಕೂಲ್‌ನಲ್ಲಿ ಓದುತ್ತಿದ್ದಳು. ಅನ್ಯ ಕೋಮಿನ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು‌. ಈ ಬಗ್ಗೆ ಮನೆಯವರಿಗೆ ಗೊತ್ತಾಗಿತ್ತು. ಆ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದರೂ ಆಕೆ ಆ ಯುವಕನೊಡನೆ ಪ್ರೀತಿ- ಒಡನಾಟ ಮುಂದುವರಿಸಿದ್ದಳು.

ಇದರಿಂದ ಸಿಟ್ಟಾಗಿದ್ದ ಓಂಕಾರ್ ಗೌಡ, ಅಕ್ಟೋಬರ್ 31ರಂದು ಮಧ್ಯಾಹ್ನ ಮಗಳನ್ನು ಸಿನಿಮಾ ತೋರಿಸುವುದಾಗಿ ಬೈಕ್‌ನಲ್ಲಿ ಕರೆದೊಯ್ದ. ಚಿತ್ರಮಂದಿರದ ಬಳಿ ಹೋದಾಗ ಸಿನಿಮಾ ಆರಂಭವಾಗಿತ್ತು, ಅಲ್ಲಿಂದ ಹೊಟೇಲ್‌ಗೆ ಕರೆದೊ‌ಯ್ದು ತಿಂಡಿ ತಿನ್ನಿಸಿದ. ಬಳಿಕ ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿದ. ಆಭರಣದ ಅಂಗಡಿಯಲ್ಲಿ ಒಂದು ಜತೆ ಓಲೆ, ಉಂಗುರವನ್ನೂ ಮಗಳಿಗೆ ಕೊಡಿಸಿದ.

ಊರಿಗೆ ಹಿಂತಿರುಗುವ ಹೊತ್ತಿಗೆ ರಾತ್ರಿಯಾಗಿತ್ತು. ಪಟ್ಟಣದ ಸಿದ್ದಮ್ಮನಹಳ್ಳಿ ಬಳಿಯ ಎಚ್‌ಎಲ್‌ಸಿ ಕಾಲುವೆ ಬಳಿಗೆ ಮಗಳನ್ನು ಕರೆತಂದು, ‘ಸ್ವಲ್ಪ ಹೊತ್ತು ನಿಂತಿರು, ಕೆಲಸವಿದೆ’ ಎಂದು ಹೇಳಿ ಕಣ್ಮರೆಯಾದ. ಆನಂತರ ಹಿಂದಿನಿಂದ ಬಂದು ಕಾಲುವೆಗೆ ಅವಳನ್ನು ತಳ್ಳಿದ. ಬಾಲಕಿ ‘ಅಪ್ಪ, ಅಪ್ಪ’ ಎಂದು ಕೂಗುತ್ತ ನೀರಿನಲ್ಲಿ ಕೊಚ್ಚಿಕೊಂಡು ಹೋದಳು. ಆನಂತರ ಓಂಕಾರ್‌ಗೌಡ ಬೈಕ್‌ ಅನ್ನು ತನ್ನ ಗೆಳೆಯ ಭೀಮಪ್ಪನ ಮನೆಯಲ್ಲಿ ಬಿಟ್ಟು ತಿರುಪತಿಗೆ ರೈಲು ಹತ್ತಿದ.

ನಂತರ ಸ್ಥಳೀಯರಿಂದ ಪೊಲೀಸರಿಗೆ ವಿಷಯ ಗೊತ್ತಾಗಿತ್ತು. ತಿರುಪತಿ ದರ್ಶನ ಮುಗಿಸಿ ವಾಪಸ್‌ ಬರುವಾಗ ಕೊಪ್ಪಳದ ಬಳಿ ಓಂಕಾರಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಮಗಳನ್ನು ತಾನೇ ಹತ್ಯೆ ಮಾಡಿರುವುದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. ಬಾಲಕಿಯ ಶವಕ್ಕಾಗಿ ಪೊಲೀಸರು ಕಾಲುವೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ