Breaking News

ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಪೊಲೀಸರು ಕರೆ ತಂದಿದ್ದ ಆರೋಪಿ ಠಾಣೆಯಲ್ಲಿಯೇ ಸಾವು

Spread the love

ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಪೊಲೀಸರು ಕರೆ ತಂದಿದ್ದ ಆರೋಪಿ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ಬೆಳಗಾವಿಯ ನಗರದಲ್ಲಿ‌ ನಡೆದಿದೆ.

ಹೌದು ಗಾಂಜಾ ಆರೋಪದಡಿಯಲ್ಲಿ ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿಯೊರ್ವ ಮೃತಪಟ್ಟಿರುವ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸಗೌಡ ಈರಗೌಡ ಪಾಟೀಲ್ ಸಾವನ್ನಪ್ಪಿರುವ ಆರೋಪಿ.

ಹಿಂಡಲಗಾ ಜೈಲಿನಿಂದ ವಿಚಾರಣೆ ಬಂದ ವ್ಯಕ್ತಿಯೊಬ್ಬನಿಗೆ ಈತ ಗಾಂಜಾ ನೀಡಿದ ಪ್ರಕರಣದಲ್ಲಿ ಠಾಣೆಗೆ ತಂದು ವಿಚಾರಣೆ ಮಾಡಲಾಗುತಿತ್ತು. ಆ ಸಂದರ್ಭದಲ್ಲಿ ಈತನಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಪಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ನಾರಾಯಣ ಭರಮಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ


Spread the love

About Laxminews 24x7

Check Also

ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ…

Spread the love ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ