Breaking News

ಕಲಬುರಗಿಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

Spread the love

ಲಬುರಗಿ: ಸೇಡಂ ಪಟ್ಟಣದಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಮಲ್ಲಿಕಾರ್ಜುನ್ ಮುತ್ಯಾಲ(64) ಕೊಲೆಯಾದವರು. ಬಿಜೆಪಿ ಮುಖಂಡರೂ ಆಗಿದ್ದ ಮಲ್ಲಿಕಾರ್ಜುನ್​ ಅವರು ಸೇಡಂ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ ಇಟ್ಟುಕೊಂಡಿದ್ದರು.

 

ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ಇಂದು(ಮಂಗಳವಾರ) ಮಲ್ಲಿಕಾರ್ಜುನ್​ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮರ್ಮಾಂಗಕ್ಕೆ ಚಾಕು ಇರಿದು, ಕತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸೇಡಂ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ. ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ