Breaking News
Home / ರಾಜಕೀಯ / ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ: ಬಿಜೆಪಿ ಮುಖಂಡ ಬಂಧನ, ಬಿಡುಗಡೆ

ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ: ಬಿಜೆಪಿ ಮುಖಂಡ ಬಂಧನ, ಬಿಡುಗಡೆ

Spread the love

ಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ‌ ಅವರನ್ನು ನಗರದ ಬ್ರಹ್ಮಪುರ ಠಾಣೆಯ ಪೊಲೀಸರು ಹೈದರಾಬಾದ್‌ನಲ್ಲಿ ಭಾನುವಾರ ರಾತ್ರಿ ಬಂಧಿಸಿದರು. ಬಳಿಕ ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

 

‘ಸಾಯಲು ಸಿದ್ಧ, ಶೂಟ್‌ ಮಾಡಲು ಸಿದ್ಧ’ ಎಂಬ ಹೇಳಿಕೆ ನೀಡಿ ಪ್ರಿಯಾಂಕ್ ಖರ್ಗೆ ಅವರಿಗೆ ಜೀವಬೆದರಿಕೆ ಒಡ್ಡಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ತಿಪ್ಪಣ್ಣಪ್ಪ ದೂರು ನೀಡಿದ್ದರು.

9 ಮಂದಿ ವಿರುದ್ಧ ಪ್ರಕರಣ: ಬಿಜೆಪಿ ಮುಖಂಡರಾದ ವಿಠಲ್ ವಾಲ್ಮೀಕಿ ನಾಯಕ, ಅರವಿಂದ ಚವಾಣ್, ಮಣಿಕಂಠ ರಾಠೋಡ ಸೇರಿ 9 ಮಂದಿ ವಿರುದ್ಧ ಚಿತ್ತಾಪುರ ಠಾಣೆಯಲ್ಲಿ ‘ಮುಂಜಾಗ್ರತಾ ಕ್ರಮದ ವರದಿ’ ಆಧರಿಸಿ ಪ್ರಕರಣ ದಾಖಲಾಗಿದೆ. ಮಣಿಕಂಠ ರಾಠೋಡ್, ಗೋಪಾಲ್ ರಾಠೋಡ್, ರಾಮದಾಸ್ ಚವಾಣ್, ಅಶ್ವಥ್ ರಾಠೋಡ್, ಬಾಲಾಜಿ ಬುರಬುರೆ, ಮಹೇಶ ಬಾಳಿ, ಶಂಭುಲಿಂಗ ಭಂಗಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ