Breaking News

ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಕೊಂದ ಭೂಪ……….

Spread the love

ಕೋಲಾರ: ಕುಡಿದ ಮತ್ತಿನಲ್ಲಿ ಭೂಪನೊಬ್ಬ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಷ್ಟೂರು ಗ್ರಾಮದ ಕುಮಾರ್ ಹಾವನ್ನು ಸಾಯಿಸಿದ ಭೂಪ. ನಶೆಯಲ್ಲಿದ್ದ ಕುಡುಕ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನು ಹಿಡಿದು ಕತ್ತಿಗೆ ಸುತ್ತಿಕೊಂಡು ಗ್ರಾಮ ಪ್ರವೇಶಿಸಿದ್ದಾನೆ. ಗ್ರಾಮದ ಮಧ್ಯೆ ಬರುತ್ತಿದ್ದಂತೆ ಕುತ್ತಿಗೆ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕುಮಾರ್ ಹಾವನ್ನು ಕಚ್ಚಿ ಸಾಯಿಸುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಆದ್ರೆ ಭಯದಿಂದ ಯಾರು ಕುಮಾರ್ ನನ್ನು ತಡೆಯಲು ಮುಂದಾಗಿಲ್ಲ.

ಹಾವು ಸಾಯಿಸಿದ ಬಳಿಕ ಕುಮಾರ್ ಆರೋಗ್ಯವಾಗಿದ್ದು, ಗ್ರಾಮದಲ್ಲಿ ಓಡಾಡಿಕೊಂಡಿದ್ದಾನೆ. ಹಾವನ್ನ ಸಾಯಿಸಿದ್ದಕ್ಕೆ ಗ್ರಾಮಸ್ಥರು ಸಹ ಕ್ಲಾಸ್ ತೆಗೆದುಕೊಂಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್

Spread the loveಕೋಲಾರ: ‌ಕುಡಿಯುವ ನೀರಿನ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡದ ಹಾಗೂ ಸಮಸ್ಯೆ ನೀಗಿಸಲು ಕ್ರಮ ವಹಿಸದ ಅಧಿಕಾರಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ