Breaking News

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು

Spread the love

ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ.
ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ (SWR) ರೈಲ್ವೇ ಮಂಡಳಿಗೆ ಪತ್ರ ಬರೆದಿದೆ. ನೈಋತ್ಯ ವಲಯದ ಜನರಲ್ ಮ್ಯಾನೇಜರ್ ಸಂಜಯ್ ಕಿಶೋರ್ ಅವರು ಕರ್ನಾಟಕದ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರಿಗೆ ಔಪಚಾರಿಕವಾಗಿ ವಿಷಯ ತಿಳಿಸಿದ್ದಾರೆ. ಇದಕ್ಕೆ ಅನುಮೋದನೆ ಸಿಕ್ಕರೆ ಉತ್ತರ ಕರ್ನಾಟಕದ ಮಂದಿ ವಂದೇ ಭಾರತ್ ರೈಲು ಪ್ರಯಾಣವನ್ನು ಆನಂದಿಸುವ ಕಾಲ ದೂರವೇನಿಲ್ಲ.

ಮೈಸೂರು- ಚೆನ್ನೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ವೇಗ ಹೆಚ್ಚಳ ಸಾಧ್ಯತೆ

ಚೆನ್ನೈ ಮಾರ್ಗವನ್ನು ಹೊರತುಪಡಿಸಿ ಬೆಂಗಳೂರು-ಹುಬ್ಬಳ್ಳಿ ಮತ್ತು ಬೆಂಗಳೂರು-ಕೊಯಮತ್ತೂರು ಮಾರ್ಗಗಳಲ್ಲಿ ವಂದೇ ಭಾರತ್ ರೈಲುಗಳನ್ನು ಓಡಿಸುವಂತೆ ರಾಜ್ಯಸಭಾ ಸಂಸದರು ಈ ಹಿಂದೆ ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿದ್ದರು.

ಎಸ್‌ಬಿಸಿಯಿಂದ ಯುಬಿಎಲ್‌ಗೆ (ಬೆಂಗಳೂರು ನಗರದಿಂದ ಹುಬ್ಬಳ್ಳಿಗೆ) ವಂದೇ ಭಾರತ್ ಚಾಲನೆ ಮಾಡಲು ರೈಲ್ವೆ ಮಂಡಳಿಯು ವೇಳಾಪಟ್ಟಿಯನ್ನು ಕೇಳಿದೆ ಮತ್ತು ಪ್ರಸ್ತಾವನೆಯನ್ನು ಎಸ್‌ಡಬ್ಲ್ಯೂಆರ್ ರೈಲ್ವೆ ಮಂಡಳಿಗೆ ಕಳುಹಿಸಿದೆ ಎಂದು ಕಳೆದ ವಾರ ಎಸ್‌ಡಬ್ಲ್ಯೂಆರ್ ಜನರಲ್ ಮ್ಯಾನೇಜರ್ ಬಿಜೆಪಿ ಸಂಸದರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿನಿಂದ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಈ ರೈಲು ಈಗಿರುವ ಶತಾಬ್ದಿ ಎಕ್ಸ್‌ಪ್ರೆಸ್‌ಗಿಂತ ಸ್ವಲ್ಪ ವೇಗವಾಗಿ ಓಡಲಿದೆ.

ವಂದೇ ಭಾರತ್ ರೈಲು ಶತಾಬ್ದಿ ಎಕ್ಸ್‌ಪ್ರೆಸ್‌ನಂತೆ ಮೈಸೂರು-ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ಕಾರ್ಯನಿರ್ವಹಿಸಲಿದೆ. ಇದು ಗಂಟೆಗೆ 160-180 ಕಿಮೀ ವೇಗದಲ್ಲಿ ಓಡುವ ಸಾಮರ್ಥ್ಯವನ್ನು ಹೊಂದಿದ್ದರೂ, ಇದು ಅಸ್ತಿತ್ವದಲ್ಲಿರುವ ಮಾರ್ಗಗಳಲ್ಲಿ ಗಂಟೆಗೆ 75-77 ಕಿಮೀ ವೇಗದಲ್ಲಿ ಚಲಿಸುತ್ತದೆ.

ಈ ವಾರದ ಆರಂಭದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಾಯೋಗಿಕ ಚಾಲನೆಯನ್ನು ಚೆನ್ನೈನಿಂದ ಮೈಸೂರಿಗೆ ಯಶಸ್ವಿಯಾಗಿ ನಡೆಸಲಾಯಿತು. ಸೋಮವಾರ ಮುಂಜಾನೆ 5.50ಕ್ಕೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಆರಂಭವಾದ ರೈಲು ಮಧ್ಯಾಹ್ನ 12.30ಕ್ಕೆ ಮೈಸೂರು ತಲುಪಿ ಕಟಪಾಡಿ ಮತ್ತು ಕೆಎಸ್‌ಆರ್ ಬೆಂಗಳೂರಿನಲ್ಲಿ ನಿಂತಿತು. ಹಿಮ್ಮುಖ ದಿಕ್ಕಿನಲ್ಲಿ ಮೈಸೂರು ಜಂಕ್ಷನ್‌ನಿಂದ ಮಧ್ಯಾಹ್ನ 1.05ಕ್ಕೆ ಆರಂಭವಾದ ಪ್ರಾಯೋಗಿಕ ಓಡಾಟ ಅದೇ ದಿನ ರಾತ್ರಿ 7.35ಕ್ಕೆ ಚೆನ್ನೈ ತಲುಪಿತ್ತು. ಒಟ್ಟಿನಲ್ಲಿ ಉತ್ತರ ಕರ್ನಾಟಕದಲ್ಲಿ ವಂದೇ ಭಾರತ್ ರೈಲು ಸಂಚಾರ ಆ ಭಾಗದ ಜನರಿಗೆ ಸಂತಸದ ವಿಷಯವಾಗಿದೆ.


Spread the love

About Laxminews 24x7

Check Also

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Spread the loveಬೆಂಗಳೂರು: ಇನ್ನು ಮುಂದೆ  ಎಸ್‌ಎಸ್‌ಎಲ್‌ಸಿ ಪರೀಕ್ಷೆ  625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ