Breaking News

ಬಣಜಿಗರಿಗೆ ಅವಹೇಳನ ಆರೋಪ: ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಪ್ರತಿಭಟನೆ

Spread the love

ಹೊಸಪೇಟೆ (ವಿಜಯನಗರ): ಬಣಜಿಗರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದವರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ತಹಶೀಲ್ದಾರ್‌ ಕಚೇರಿ ಎದುರು ಸೇರಿದ ಸಂಘದವರು ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಳಿಕ ಮನವಿ ಪತ್ರ ಸಲ್ಲಿಸಿದರು.

 

ಇತ್ತೀಚೆಗೆ ವಿಜಯಪುರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್‌ ಅವರು ವಿನಾಕಾರಣ ಬಣಜಿಗ ಸಮಾಜದ ಬಗ್ಗೆ ವ್ಯಂಗ್ಯವಾಗಿ ಮತ್ತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹೀಗೆ ಮಾಡುವುದರ ಮೂಲಕ ಅವರು ಸಮಾಜಕ್ಕೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

 

2ಎಗೆ ಪಂಚಮಸಾಲಿ ಸಮಾಜದವರನ್ನು ಸೇರ್ಪಡೆಗೊಳಿಸಬೇಕೆಂಬ ಹೋರಾಟಕ್ಕೆ ಬಣಜಿಗರ ಸಂಪೂರ್ಣ ಬೆಂಬಲವಿದೆ. ಸಮಾಜ ಯಾರ ವಿರುದ್ಧವೂ ಇಲ್ಲ. ಎಲ್ಲ ರೀತಿಯ ಸಹಕಾರ ಕೊಡಲು ಸಿದ್ಧ ಎಂದು ತಿಳಿಸಿದರು.

 

ಸಂಘದ ಗೌರವ ಅಧ್ಯಕ್ಷ ಕಲ್ಮಠಪ್ಪ ಜವಳಿ, ಅಧ್ಯಕ್ಷ ಅಕ್ಕಿ ದೊಡ್ಡಬಸವರಾಜ, ಉಪಾಧ್ಯಕ್ಷರಾದ ಜಿ.ಕೆ. ವಿಶ್ವನಾಥ, ಗಡಾದ ಪ್ರಸಾದ್, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಜಾಲಿ, ಖಜಾಂಚಿ ವೈ. ಅನ್ನದಾನಪ್ಪ, ಸಹಕಾರ್ಯದರ್ಶಿ ಕೆ. ಚಂದ್ರಶೇಖರ್‌, ನಗರಸಭೆ ಸದಸ್ಯ ಮಂಜುನಾಥ ಇತರರಿದ್ದರು.


Spread the love

About Laxminews 24x7

Check Also

ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ

Spread the love ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ