Breaking News

36 ತಿಂಗಳು ಬಾಕಿ ವೇತನ ನೀಡಲು ಒತ್ತಾಯ

Spread the love

ಬೆಂಗಳೂರು: ಎಂ.ಆರ್.ಎನ್. ಶುಗರ್ಸ್‌ ಆಯಂಡ್‌ ಬಯೋಫೈನರ್ಸ್‌ ಮುಧೋಳ (ಮುರುಗೇಶ ನಿರಾಣಿ) ಅವರ ಸಂಸ್ಥೆಯಿಂದ 36 ತಿಂಗಳ ಶೇ 50ರಷ್ಟು ಬಾಕಿ ವೇತನ ಪಾವತಿಯಾಗಿಲ್ಲ ಎಂದು ಪಿ.ಎಸ್.ಎಸ್.ಕೆ ಎಂಪ್ಲಾಯೀಸ್‌ ಅಸೋಸಿಯೇಷನ್‌ ಆರೋಪಿಸಿದೆ.

‘ಸರ್ಕಾರ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸಚಿವ ಮುರುಗೇಶ ನಿರಾಣಿ ಅವರ ಸಂಸ್ಥೆಗೆ 41 ವರ್ಷಗಳ ಗುತ್ತಿಗೆ ನೀಡಿದೆ.

2020ರಲ್ಲಿ ಸಚಿವರ ನೇತೃತ್ವದಲ್ಲಿ ನಡೆದ ಕಾರ್ಮಿಕ ಮುಖಂಡರ ಸಭೆಯಲ್ಲಿ 3 ವರ್ಷಗಳಿಂದ ಕಾರ್ಖಾನೆ ನಡೆಯದ ಕಾರಣ ನಿಮ್ಮ ವೇತನ ನೀಡಿಲ್ಲ. ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಿ ಸಕ್ಕರೆ ಬಿದ್ದ ತಕ್ಷಣ ನಿಮ್ಮ ಎಲ್ಲಾ ವೇತನವನ್ನು ನೀಡಲಾಗುವುದು ಎಂದಿದ್ದರು, ಆದರೆ ಇದುವರೆಗೆ ಪಾವತಿ ಮಾಡಿಲ್ಲ’ ಎಂದು ಅಸೋಸಿಯೇಷನ್ ಅಧ್ಯಕ್ಷ ಡಿ. ಚಿಕ್ಕಯ್ಯ ಆರೋಪಿಸಿದರು.

‘2020ರಲ್ಲಿ 1,70,000 ಟನ್, 2021ರಲ್ಲಿ 4,60,000 ಟನ್ ಮತ್ತು 2022ರಲ್ಲಿ 3,30,000 ಟನ್‌ ಕಬ್ಬು ನುರಿಸಲಾಗಿದ್ದು, ಬಾಕಿ ವೇತನ, ರಜಾ ವೇತನ, ಶಾಸನಬದ್ಧ ಬೋನಸ್, 6 ಮತ್ತು 7ನೇ ತ್ರಿಪಕ್ಷೀಯ ಮಂಡಳಿಯ ಹಿಂಬಾಕಿ ಮತ್ತು ಪಿ.ಎಫ್ ಹಣವನ್ನು ನೀಡಬೇಕು’ ಎಂದು ಆಗ್ರಹಿಸಿದರು.

‘ನಿವೃತ್ತಿ ಹೊಂದಿದ ಕಾರ್ಮಿಕರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಕೆಲವರು ಈಗಾಗಲೇ ನಿಧನರಾಗಿದ್ದಾರೆ. ಆದ್ದರಿಂದ ತಕ್ಷಣ ಹಣ ಬಿಡುಗಡೆ ಮಾಡಬೇಕು’ ಎಂದು ವೇಣುಗೋಪಾಲ ಹೇಳಿದರು.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ