Breaking News

ರೈತನಿಗೆ ಪರಿಹಾರ ವಿಳಂಬ: ಅಧಿಕಾರಿಗಳ ವಾಹನ ಜಪ್ತಿ

Spread the love

ಚಿಕ್ಕೋಡಿ : ರಸ್ತೆ ನಿರ್ಮಿಸಲು ಸ್ವಾದೀನ ಪಡೆದಿದ್ದ ಭೂಮಿಗೆ ರೈತನಿಗೆ ₹11 ಲಕ್ಷ ಪರಿಹಾರಧನ ನೀಡಲು ವಿಳಂಬ ಹಿನ್ನೆಲೆಯಲ್ಲಿ ಕೋರ್ಟ್‌ ಆದೇಶದಂತೆ ಉಪವಿಭಾಗಾಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಎಇಇ ಅವರ ವಾಹನಗಳನ್ನು ಗುರುವಾರ ಜಪ್ತಿ ಮಾಡಲಾಗಿದೆ.

 

15 ವರ್ಷದ ಹಿಂದೆ ಚಿಕ್ಕೋಡಿ ತಾಲ್ಲೂಕಿನ ಮಾಂಗೂರ (ಈಗಿನ ನಿಪ್ಪಾಣಿ ತಾಲ್ಲೂಕು) ಗ್ರಾಮದ ರೈತ ಬುದ್ದಿರಾಜ ಶಾಂತಿನಾಥ ಪಾಟೀಲ ಅವರ 31 ಗುಂಟೆ ಭೂಮಿಯನ್ನು ಇಲಾಖೆ ಪಡೆದುಕೊಂಡಿತ್ತು. ಈವರೆಗೂ ರೈತನಿಗೆ ಪರಿಹಾರ ಧನ ನೀಡಿರಲಿಲ್ಲ.

ರೈತ ಪರಿಹಾರ ಕೋರಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 2021ರಲ್ಲಿ ₹11,70,757 ಪರಿಹಾರ ನೀಡಲು ಆದೇಶಿಸಿತ್ತು. ಒಂದು ವರ್ಷ ಕಳೆದರೂ ಪರಿಹಾರ ನೀಡದ್ದರಿಂದ ವಾಹನಗಳ ಜಪ್ತಿಗೆ ನ್ಯಾಯಾಲಯ ಆದೇಶಿಸಿತ್ತು.

ವಾಹನ ಜಪ್ತಿಗೆ ಬಂದ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಾಧವ ಗಿತ್ತೆ ಮತ್ತು ನ್ಯಾಯಾಲಯ ಸಿಬ್ಬಂದಿ ಮಧ್ಯೆ ಕೆಲಹೊತ್ತು ಮಾತಿನ ಚಕಮಕಿಯೂ ನಡೆಯಿತು.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಿದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

Spread the love ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿಗಳಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ