Breaking News

ರೈತರ ಆಕ್ರೋಶಕ್ಕೆ ಕಾರಣವಾಗಿದೆ ಲೈಲಾ ಶುಗರ್ಸ ಕಾರ್ಖಾನೆ

Spread the love

ಖಾನಾಪುರದ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಬ್ಬು ಪೂರೈಕೆ ಮಾಡಿದ ರೈತರು ಸಕ್ಕರೆ ಪಡೆಯಲು ಪರದಾಡಿದ ಘಟನೆ ನಡೆದಿದೆ.

ಹೌದು ಮಹಾಲಕ್ಷ್ಮೀ ಗ್ರುಪ್ ಸಂಚಾಲಿತ ಲೈಲಾ ಶುಗರ್ಸ್ ಕಾರ್ಖಾನೆಯಲ್ಲಿ ಕಳೆದ ದಿನಾಂಕ 14ರಿಂದ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಟನ್ 25 ರೂಪಾಯಿ ದರದಲ್ಲಿ ಸಕ್ಕರೆ ಪಡೆದುಕೊಳ್ಳುವ ವ್ಯವಸ್ಥೆ ಮಾಡಿಕೊಡಲಾಗಿತ್ತು.

ಆದರೆ ತಾಲೂಕಿನ ಗಡಿಭಾಗ ಸೇರಿದಂತೆ ತಾಲೂಕಿನ ಬೇರೆ ಕಡೆಯಿಂದ ಬಂದು ತಮ್ಮ ಸ್ಲೀಪ್ ತೋರಿಸಿ ಆಧಾರ್ ಕಾರ್ಡ್ ನೋಂದಣಿ ಮಾಡಿಸಿಕೊಂಡು ಕ್ರಮಬದ್ಧವಾಗಿ ಹೋಗಿ ಸಕ್ಕರೆ ಪಡೆದುಕೊಳ್ಳಬೇಕಿತ್ತು.

ಆದರೆ ಕಾರ್ಖಾನೆಯವರು ರೀತಿಯ ವ್ಯವಸ್ಥೆ ಮಾಡದೇ ಒಂದೇ ಒಂದು ತೂಕ ಮಾಡುವ ಯಂತ್ರ ಇಟ್ಟಿದ್ದು ಇದರಿಂದ ಸಿಬ್ಬಂದಿ ತಮಗೆ ಬೇಕಾದ ಹಾಗೆ ನೀಡುತ್ತಿದ್ದಾರೆ. ತುಂಬಾ ನಿಧಾನಗತಿಯಲ್ಲಿ ವಿತರಣೆ ಮಾಡುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಬೇಕೆಂದರೆ ಕಾಲ್ ರಿಸೀವ್ ಮಾಡುತ್ತಿಲ್ಲ. ನಮ್ಮ ಈ ನ್ಯೂಸ್ ನೋಡಿಯಾದರೂ ತ್ವರಿತವಾಗಿ ರೈತರಿಗೆ ಸಕ್ಕರೆಯನ್ನು ವಿತರಣೆ ಮಾಡುತ್ತಾರಾ ಎಂದು ಕಾದು ನೋಡಬೇಕಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ