Breaking News

ಆರೋಗ್ಯ ಕೇಂದ್ರಕ್ಕೆ ಬಾರದ ವೈದ್ಯರು, ನರ್ಸ್‌: 2 ತಾಸು ನರಳಾಡಿದ ತುಂಬು ಗರ್ಭಿಣಿ

Spread the love

ಕಿತ್ತೂರು : ಸಮೀಪದ ಸಂಗೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ, ಸೂಕ್ತ ಸಮಯಕ್ಕೆ ಗರ್ಭಿಣಿಗೆ ಚಿಕಿತ್ಸೆ ನೀಡದ ಶುಶ್ರೂಷಕಿಯನ್ನು ವರ್ಗಾವಣೆ ಮಾಡಿದ್ದು, ಆಸ್ಪತ್ರೆಯ ಇಬ್ಬರು ವೈದ್ಯರಿಗೂ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ.

 

ತಾಲ್ಲೂಕಿನ ಕಡತನಾಳ ಗ್ರಾಮದ ರತ್ನವ್ವ ಕಾದ್ರೊಳ್ಳಿ ಅವರನ್ನು ಗುರುವಾರ ಹೆರಿಗೆಗೆ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಲ್ಲಿ ವೈದ್ಯರು, ನರ್ಸ್‌ ಸೇರಿದಂತೆ ಯಾರೂ ಇರಲಿಲ್ಲ. ಎರಡು ತಾಸು ಆಸ್ಪತ್ರೆಯ ಆವರಣದಲ್ಲೇ ಗರ್ಭಿಣಿ ತೀವ್ರ ನರಳಾಡಿದರು. ಹೆರಿಗೆ ನೋವಿನಿಂದ ಇನ್ನಿಲ್ಲದಂತೆ ಪರದಾಡಿದರು. ಕೊನೆಗೂ ವೈದ್ಯರಾಗಲೀ, ನರ್ಸ್‌ ಆಗಲೀ ಬರಲಿಲ್ಲ. ಕೆಲವರು ಬೈಲಹೊಂಗಲದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಸುರಕ್ಷಿತ ಹೆರಿಗೆ ಮಾಡಿಸಿದರು.

ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಮಾತ್ರ ವರದಿ ಪ್ರಕಟವಾಯಿತು. ಶುಕ್ರವಾರ ಇದನ್ನು ಗಮನಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಕೋಣಿ ಸ್ಥಳಕ್ಕೆ ಧಾವಿಸಿದರು. ಕರ್ತವ್ಯದಲ್ಲಿ ಇಲ್ಲದ ಡಾ.ಸಂತೋಷ ಗಡದವರ ಮತ್ತು ಡಾ.ಸುಷ್ಮಾ ಬಾಳಮಟ್ಟಿ ಅವರಿಗೆ ನೋಟಿಸ್‌ ಜಾರಿ ಮಾಡಿದರು. ಪಾಳಿಯ ಕೆಲಸದಲ್ಲೂ ಗೈರಾದ ನರ್ಸ್‌ ಬಿ.ಶಾಂತಮ್ಮ ಅವರನ್ನು ತಕ್ಷಣ ವರ್ಗಾವಣೆ ಮಾಡಿದರು.

ಆರೋಗ್ಯ ಕೇಂದ್ರದ ಇಬ್ಬರೂ ವೈದ್ಯರು ಕರ್ತವ್ಯದಿಂದ ನುಣಿಚಿಕೊಂಡಿದ್ದು ಸಾಬೀತಾಗಿದೆ. ಅವರು ನೋಟಿಸ್‌ಗೆ ನೀಡುವ ಉತ್ತರ ಗಮನಿಸಿ ಅವರ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ‘ ಮಾಹಿತಿ ನೀಡಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ