Breaking News

ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್

Spread the love

ಹುಬ್ಬಳ್ಳಿ: ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಕಲಿ ವಿಳಾಸ ಪತ್ತೆಯಾಗಿದ್ದು, ಅದು ಹುಬ್ಬಳ್ಳಿಯ ಪ್ರೇಮ್ ರಾಜ್ ಅವರಿಗೆ ಸೇರಿದೆ.

ಆಟೋರಿಕ್ಷಾದಲ್ಲಿ ಪತ್ತೆಯಾದ ಆಧಾರ ಕಾರ್ಡ್ ಹುಬ್ಬಳ್ಳಿಯ ಕೇಶ್ವಾಪುರ ಮಧುರಾ ಕಾಲೋನಿ ನಿವಾಸಿ ಪ್ರೇಮರಾಜ್ ಹೆಸರಿನಲ್ಲಿದೆ.

ಆದರೆ ಈ ಆಧಾರ್ ಕಾರ್ಡ್ ಕಳೆದು ಹೋಗಿತ್ತು. ಇವರದೇ ವಿಳಾಸವನ್ನು ಬ್ಲಾಸ್ಟ್ ನಲ್ಲಿ ಬಳಕೆ ಮಾಡಲಾಗಿದೆ. ಪ್ರೇಮ್ ರಾಜ್‌ಗೂ ಈ ಪ್ರಕರಣಕ್ಕೆ ಸಂಬಂಧ ಇಲ್ಲ ಎನ್ನುತ್ತಿದ್ದಾರೆ ಕುಟುಂಬದವರು.

“ನನ್ನ ಮಗ ಅಂಥವನಲ್ಲ. ಈ ಪ್ರಕರಣಕ್ಕೂ ನನ್ನ ಮಗನಿಗೂ ಯಾವುದೇ ಸಂಬಂಧವಿಲ್ಲ. ಈಗ ದಾಖಲಾತಿ ಪರಿಶೀಲನೆ ನಡೆಯುತ್ತಿದೆ. ಪೊಲೀಸರು ಕೇಳಿದ ಎಲ್ಲ ಮಾಹಿತಿ ಹಂಚಿಕೊಂಡಿದ್ದೇವೆ. ಪ್ರೇಮರಾಜ್ ಆಧಾರ ಕಾರ್ಡ್ ಕಳೆದುಕೊಂಡಿದ್ದ. ಆಗ ದೂರು ಕೊಡು ಎಂದು ಸಲಹೆ ಕೊಟ್ಟಿದ್ದೆ. ತುಮಕೂರಿನಲ್ಲಿ ನನ್ನ ಮಗನ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಬೆಳಗ್ಗೆ ನನ್ನ ಮಗನ‌ ಜೊತೆ ಮಾತನಾಡಿದ್ದೇನೆ” ಎಂದು ಅವರ ತಂದೆ ಮಾರುತಿ ಹುಟಗಿ ಹೇಳಿದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ