Breaking News

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ

Spread the love

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 48 ವಾಹನಗಳು ಜಖಂಗೊಂಡಿದೆ.

ಭಾನುವಾರ ರಾತ್ರಿ ಈ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪುಣೆ ಸಮೀಪ ಇರುವ ನವಲೆ ಬ್ರಿಡ್ಜ್​ನಲ್ಲಿ ನಡೆದಿದೆ.

ಪುಣೆಯ ಅಗ್ನಿ ಶಾಮಕ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ವೇಗವಾಗಿ ಬಂದ ಟ್ಯಾಂಕರ್​ನ ಬ್ರೇಕ್​ ಫೇಲ್​ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ 9 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಸೋರಿಕೆಯಾಗಿದ್ದ ಆಯಿಲ್​ನಿಂದಾಗಿ ವಾಹನಗಳು ಬ್ರೇಕ್​​ ಹಾಕಿದರು ಟೈರ್​ ಸ್ಲಿಪ್​ ಆಗಿಯು ಅಪಘಾತ ಸಂಭವಿಸಿವೆ.

ಈ ಘಟನೆಯಿಂದಾಗಿ ಮುಂಬೈಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಕಿ.ಮೀ.ವರೆಗೂ ಟ್ರಾಫಿಕ್​ ಜಾಮ್​ ಉಂಟಾಗಿ, ಪ್ರಯಾಣಿಕರು ಹಾಗೂ ಸವಾರರು ತುಂಬಾ ಕಿರಿಕಿರಿ ಅನುಭವಿಸಬೇಕಾಯಿತು.

ಕಳೆದ ಕೆಲವು ದಿನಗಳಿಂದ ನವಲೆ ಸೇತುವೆ ಅಪಘಾತಗಳ ಹಾಟ್ ಸ್ಪಾಟ್ ಆಗುತ್ತಿದೆ. ಶುಕ್ರವಾರ ಹೊರವರ್ತುಲ ರಸ್ತೆಯ ಸೇತುವೆ ಬಳಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿದ್ದರು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ