Breaking News

ಒಂದು ಕುಟುಂಬಕ್ಕೆ ಒಂದು ಟಿಕೆಟ್ ನೀತಿ ಏನೂ ಇಲ್ಲ; ಶಾಸಕ ಶಾಮನೂರು ಶಿವಶಂಕರಪ್ಪ

Spread the love

ದಾವಣಗೆರೆ: ನಮ್ಮ ಕುಟುಂಬದವರು ಕೇಳಿದರೆ ನಾಲ್ಕು ಟಿಕೆಟ್ ಕೊಡಲಾಗುತ್ತದೆ ಎಂದು ಹಿರಿಯ ಕಾಂಗ್ರೆಸಿಗ, ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕುಟುಂಬಕ್ಕೆ ಒಂದು ಟಿಕೆಟ್ ನೀತಿ ಏನೂ ಇಲ್ಲ.

ಕೇಳಿದರೆ ನಮ್ಮ ಕುಟುಂಬಕ್ಕೆ ನಾಲ್ಕು ಟಿಕೆಟ್ ಕೊಡಲಾಗುತ್ತದೆ ಎಂದರು.

ಎಸ್. ಎಸ್. ಮಲ್ಲಿಕಾರ್ಜುನ್ ಟಿಕೆಟ್ ಕೋರಿ ಅರ್ಜಿ ಯಾಕೆ ಸಲ್ಲಿಸಿಲ್ಲ ಎಂಬ ಪ್ರಶ್ನೆಗೆ, ಅವರನ್ನೇ( ಎಸ್. ಎಸ್. ಮಲ್ಲಿಕಾರ್ಜುನ್) ಕೇಳಬೇಕು ಎಂದರು.

ಮಲ್ಲಿಕಾರ್ಜುನ್ ಅವರೊಂದಿಗೆ ಅರ್ಜಿ ಸಲ್ಲಿಸುವ ಬಗ್ಗೆ ಏನೂ ಮಾತನಾಡಿಲ್ಲ. ಅವರವರು ಅವರದ್ದೇ ಸ್ವಂತ ಅಭಿಪ್ರಾಯ ಹೊಂದಿರುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ