Breaking News

ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.: ಅನಿಲ್ ಬೆನಕೆ

Spread the love

ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ತಜ್ಞರ ಮಾರ್ಗದರ್ಶನದಲ್ಲಿ ಯುದ್ಧೋಪಾದಿಯಲ್ಲಿ ಸಂಭಾಜಿ ಮಹಾರಾಜರ ಪ್ರತಿಮೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಬುಧವಾರ ಶಾಸಕ ಅನಿಲ್ ಬೆನಕೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಬೆಳಗಾವಿಯಲ್ಲಿನ ಎಲ್ಲಾ ವೃತ್ತಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಅದೇ ರೀತಿ ಸಂಭಾಜಿ ವೃತ್ತವನ್ನೂ ಸೌಂದರ್ಯಿಕರಣ ಮಾಡಲಾಗುತ್ತಿದೆ.

ಸಂಭಾಜಿ ಮಹಾರಾಜರು ಈ ಪ್ರದೇಶಕ್ಕೆ ಭೇಟಿ ನೀಡಿದ ಐತಿಹಾಸಿಕ ದಾಖಲೆಗಳಿವೆ. ಛತ್ರಪತಿ ಸಂಭಾಜಿ ಮಹಾರಾಜರ ಸ್ಮಾರಕವನ್ನು ಆಧುನಿಕ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ನಿರ್ಮಾಣ ಮಾಡಲಾಗುತ್ತಿದೆ. ಶೀಘ್ರವೇ ಇದನ್ನು ಲೋಕಾರ್ಪಣೆ ಮಾಡುತ್ತೇವೆ ಎಂದು ಅನಿಲ್ ಬೆನಕೆ ಅವರು ಭರವಸೆ ನೀಡಿದರು.

ಉತ್ತಮ ಗುಣಮಟ್ಟದ ಕುಶಲಕರ್ಮಿಗಳು ಈ ಕೆಲಸವನ್ನು ಮಾಡಲು ಹಗಲೀರುಳು ಶ್ರಮಿಸುತ್ತಿದ್ದಾರೆ. ಈ ಕಾಮಗಾರಿಗೆ ಹಣ ಮಂಜೂರು ಮಾಡಲು ಶಾಸಕ ಅನಿಲ್ ಬೆನಕೆ ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ.

ಈ ವೇಳೆ ಸಂಭಾಜಿ ಮಹಾರಾಜರ ಸ್ಮಾರಕ ಸೌಂದರ್ಯೀಕರಣ ಸಮಿತಿ ಅಧ್ಯಕ್ಷ ಸುನೀಲ ಜಾಧವ, ಮರಾಠ ಸಮಾಜದ ಮುಖಂಡ ಗುಣವಂತ ಪಾಟೀಲ, ಲೋಕಮಾನ್ಯ ತಿಲಕ ಗಣೇಶ ಮಂಡಳಿ ಅಧ್ಯಕ್ಷ ವಿಜಯ ಜಾಧವ, ಶಿವಸೇನೆ ಮುಖಂಡ ಬಂಡು ಕೇರವಾಡಕರ, ನಗರಸೇವಕ ಜಯತೀರ್ಥ ಸವದತ್ತಿ, ಪ್ರವೀಣ ಪಾಟೀಲ, ಶಿವಪ್ರಸಾದ ಮೋರೆ, ಆದಿತ್ಯಾ ಪಾಟೀಲ, ಶ್ರೀನಾಥ ಪವಾರ ಸೇರಿ ಇನ್ನಿತರರು ಉಪಸ್ಥಿತರಿದ್ದರು


Spread the love

About Laxminews 24x7

Check Also

20 ವರ್ಷಕ್ಕೂ ಮೇಲ್ಪಟ್ಟು ಸೆರೆವಾಸಕ್ಕೆ ಗುರಿಯಾದವರ ಶಿಕ್ಷೆ ಮಾಫಿ ಮನವಿ ತಿರಸ್ಕರಿಸಬೇಕೆಂಬ ನಿಯಮವಿಲ್ಲ: ಹೈಕೋರ್ಟ್

Spread the loveಬೆಂಗಳೂರು: ಇಪ್ಪತಕ್ಕೂ ಹೆಚ್ಚು ವರ್ಷಗಳ ಕಾಲ ಸೆರೆವಾಸಕ್ಕೊಳಗಾಗುವ ಅಪರಾಧಿಗಳು ನಿಗದಿತ ಅವಧಿಯ ಜೈಲು ವಾಸದ ಬಳಿಕ ಶಿಕ್ಷೆಯ ಮಾಫಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ