Breaking News

ನಮ್ಮ ಮಾಸಾಶನ 5 ಸಾವಿರ ರೂಪಾಯಿಗೆ ಹೆಚ್ಚಿಸಿ ದಿವ್ಯಾಂಗರ ಪ್ರತಿಭಟನೆ

Spread the love

ಮಾಸಾಶನ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ದಿವ್ಯಾಂಗರು ಪ್ರತಿಭಟನೆ ನಡೆಸಿದರು.

ಹೌದು ಬುಧವಾರ ಬೆಳಗಾವಿಯ ಡಿಸಿ ಕಚೇರಿಗೆ ಆಗಮಿಸಿದ ಅಂಗವಿಕಲರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ದಿವ್ಯಾಂಗ ಉಮೇಶ ರೊಟ್ಟಿ ಅವರು ದೈಹಿಕವಾಗಿ ಶೇ.75ರಿಂದ ಶೇ.100ರಷ್ಟು ಅಂಗವಿಕಲತೆ ಇರುವ ಜನರಿಗೆ ಪ್ರಸ್ತುತ ಈಗಿರುವ ಮಾಸಾಶನ 1400 ರೂಪಾಯಿ ಯಾವುದಕ್ಕೂ ಸಾಲುತ್ತಿಲ್ಲ.

ಈಗಿನ ದಿನಬಳಕೆಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿವೆ. ಇದರಿಂದ ನಮಗೆ ಜೀವನ ನಿರ್ವಹಣೆ ತುಂಬಾ ಕಷ್ಟವಾಗುತ್ತಿದೆ.

ಆದ್ದರಿಂದ ಸರ್ಕಾರ ಈಗಿರುವ ಮಾಸಾಶನವನ್ನು ಕನಿಷ್ಠ 3 ಸಾವಿರ ರೂಪಾಯಿ-5 ಸಾವಿರ ರೂಪಾಯಿ ವರೆಗೆ ಏರಿಸಬೇಕು. ಅದೇ ರೀತಿ ವಿವಾಹಿತ ಅಂಗವಿಕರ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ಹಾಗೂ ಸರ್ಕಾರದ ಸಹಾಯಧನವನ್ನು ಸರ್ಕಾರ ನೀಡಬೇಕು ಎಂದು ಕೇಳಿಕೊಂಡರು.


Spread the love

About Laxminews 24x7

Check Also

ಜಾನಪದ ಲೋಕಕ್ಕೆ ತುಂಬಲಾರದ ನಷ್ಟ: ವೀರಗಾಸೆ ಕಲಾರತ್ನ ಮಹದೇವಪ್ಪ ನಿಧನಕ್ಕೆ ಚೆಲುವರಾಯಸ್ವಾಮಿ ಸಂತಾಪ

Spread the loveಮಂಡ್ಯ: ನಾಡಿನ ಹೆಸರಾಂತ ವೀರಗಾಸೆ ಕಲಾವಿದರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ವೀರಗಾಸೆ ಕಲಾರತ್ನ ಮಹದೇವಪ್ಪನವರ ನಿಧನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ