Breaking News

ಕರ್ನಾಟಕ ಕಾಂಗ್ರೆಸ್’ನಲ್ಲಿ ಮಹತ್ವದ ಬದಲಾವಣೆ: ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ

Spread the love

ಬೆಂಗಳೂರು: ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೇಜರ್ ಸರ್ಜರಿ ಎನ್ನುವಂತೆ ಕರ್ನಾಟಕ ಕಾಂಗ್ರೆಸ್ ನಿಂದ ( Karnataka Congress ) ಮಹತ್ವದ ಬದಲಾವಣೆ ಮಾಡಲಾಗಿದೆ. ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

 

 

ಈ ಸಂಬಂಧ ಕಾಂಗ್ರೆಸ್ ಪಕ್ಷದ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಜಾರಿಗೆ ಬರುವಂತೆ ಕೆಪಿಸಿಸಿಯಿಂದ ಈ ಕೆಳಕಂಡ ಐದು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ ಎಂದಿದ್ದಾರೆ.

 

ಅಂದಹಾಗೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿ ಆರ್ ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಾದಗಿರಿ-ಬಸರೆಡ್ಡಿ, ಕೊಡಗು – ಧರ್ಮಜ ಉತ್ತಪ್ಪ, ತುಮಕೂರು-ಚಂದ್ರಶೇಖರ್ ಗೌಡ ಹಾಗೂ ಹಾಸನ ಜಿಲ್ಲಾಧ್ಯಕ್ಷರನ್ನಾಗಿ ಇ ಹೆಚ್ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ