Breaking News
Home / ಜಿಲ್ಲೆ / ಬೆಂಗಳೂರು / ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢ

ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ.

ದಾವಣೆಗೆರೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ದಾವಣಗೆರೆ ಜಿಲ್ಲೆಯೊಂದರಲ್ಲೇ ಇಂದು 12 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ 1, ಹಾವೇರಿಯಲ್ಲಿ 1, ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ