Breaking News

ಕರ್ನಾಟಕ ಬಸ್ ಗೆ ಕಲ್ಲು ತೂರಿ ಮರಾಠಿ ಪುಂಡರ ಪುಂಡಾಟಿಕೆ

Spread the love

ಮತ್ತೆ ಮಹಾರಾಷ್ಟ್ರದಲ್ಲಿ ಮರಾಠಿ ಪುಂಡರು ಪುಂಡಾಟಿಕೆ ಮೆರೆದಿದ್ದು ಕರ್ನಾಟಕ ಬಸ್ ಗೆ ಕಲ್ಲು ತೂರಿ ಕನ್ನಡಿಗರನ್ನು ಕೆಣಕುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ.

ಮಿರಜ್ ಕಾಗವಾಡ‌ ಮಧ್ಯೆ ಕರ್ನಾಟಕ ಬಸ್ ಗೆ ಮಹಾರಾಷ್ಟ್ರ ಪುಂಡರು ಕಲ್ಲು ತೂರಿದ್ದಾರೆ. ಪುಣೆಯಿಂದ ಅಥಣಿಗೆ ಬರುತ್ತಿದ್ದ ಕರ್ನಾಟಕ ಬಸ್ ಇದಾಗಿದ್ದು, ನಿನ್ನೆ ರಾತ್ರಿ 10.30ಕ್ಕೆ ಚಲಿಸುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಬಸ್ ಮುಂದಿನ ಗಾಜು ಜಖಂಗೊಂಡಿದೆ. ಬೆಳಗಾವಿ ಜಿಲ್ಲೆಯ ಅಥಣಿ ಡಿಪೋಗೆ ಸೇರಿದ ಬಸ್ ಇದಾಗಿದೆ.

ಕರ್ನಾಟಕ ಬಸ್ ಗಳಿಗೆ ಕಲ್ಲು ತೂರಾಟ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಹಾಗೂ ಕಾಗವಾಡ ಬಾರ್ಡರ್ ಮಾರ್ಗವಾಗಿ ಸಂಚರಿಸುವ ಎಲ್ಲಾ ಕರ್ನಾಟಕ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಪದೇ ಪದೇ ಕಾಲು ಕೆರೆದು ಜಗಳಕ್ಕೆ ನಿಂತಿರುವ ಮಹಾರಾಷ್ಟ್ರ ಪುಂಡರಿಗೆ ಅಲ್ಲಿನ ಸರ್ಕಾರ ಎಚ್ಚರಿಕೆ ನೀಡುವ ಕೆಲಸ ಮಾಡಬೇಕು. ಆ ಬಸ್ಸಿನಲ್ಲಿ ಯಾವುದೇ ಒಂದು ಭಾಷಿಕರು ಪ್ರಯಾಣ ಮಾಡುತ್ತಿರುವುದಿಲ್ಲ. ಯಾರಿಗಾದ್ರೂ ಜೀವಕ್ಕೆ ಹಾನಿ ಆದ್ರೆ ಅದಕ್ಕ ಹೊಣೆ ಯಾರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ