Breaking News

ಮೋದ್ ಮತಾಲಿಕ್ ಗೆ ಜೀವ ಬೆದರಿಕೆ

Spread the love

ಧಾರವಾಡ: ರಾಜ್ಯ ಸರ್ಕಾರ 10 ಮುಸ್ಲಿಂ ಕಾಲೇಜುಗಳಿಗೆ ಅನುಮತಿ ಕೊಡಲು ಮುಂದಾಗಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ.

ಮೊಬೈಲ್‌ ನಂಬರ್‌ನಿಂದ ವಾಟ್ಸಪ್‌ ವಾಯ್ಸ್ ಮೆಸೇಜ್ ಒಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ.

ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಮುತಾಲಿಕ್ ಅವರು ದೂರು ದಾಖಲಿಸಿದ್ದಾರೆ.

ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನು ಮೇಲಾದರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡೋಕೆ ನೀನು ಯಾರು ಎಂದು ಅಶ್ಲೀಲ ಪದಗಳನ್ನು ಬಳಕೆ ಮಾಡಿ ಮುತಾಲಿಕ್‌ಗೆ ಆ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.

ಫೋನ್ ನಂಬರ್ ಮೇಲೆ ತನಿಖೆ ನಡೆಸುವಂತೆ ಮುತಾಲಿಕ್ ಅವರು ಗುರುವಾರ ದೂರು ದಾಖಲು ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ