Breaking News

ಹತ್ತಿ ಹೊಲದಲ್ಲೇ ಬಿತ್ತು ಜೋಡಿ ಶವ!

Spread the love

ಲಬುರಗಿ: ಹತ್ತಿ ಹೊಲದಲ್ಲಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಬರ್ಬರವಾಗಿ ಗಂಡನೇ ಕೊಂದ ಭೀಕರ ಘಟನೆ ಸುರಪುರ ತಾಲೂಕಿನ ಕಾಚಾಪುರದಲ್ಲಿ ಸಂಭವಿಸಿದೆ.

ನಾಡಗೌಡ(36) ಮತ್ತು ಮಲ್ಲಮ್ಮ(30) ಕೊಲೆಯಾದ ದುರ್ದೈವಿಗಳು. ಹತ್ತಿ ಹೊಲದಲ್ಲಿ ರಕ್ತದ ಮಡುವಲ್ಲಿ ಬಿದ್ದಿದ್ದ ಜೋಡಿ ಶವ ನೋಡಿ ಸ್ಥಳೀಯರು ಬೆಚ್ಚಿಬಿದ್ದಾರೆ.

 

ಕೊಲೆಗೆ ಅಕ್ರಮ ಸಂಬಂಧ ಕಾರಣ ಎನ್ನಲಾಗಿದೆ. ಪ್ರಿಯಕರನೊಂದಿಗೆ ಹೊಲದಲ್ಲಿದ್ದ ಪತ್ನಿಯನ್ನ ಗಂಡನೇ ಕುಡುಗೋಲಿನಿಂದ ಕೊಚ್ಚಿದ್ದಾನೆ. ಪ್ರಿಯಕರನನ್ನೂ ಅಲ್ಲೇ ಕೊಂದಿದ್ದಾರೆ. ಇಬ್ಬರ ಶವಗಳು ಪಕ್ಕದಲ್ಲೇ ಬಿದ್ದಿದ್ದವು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕೆಂಭಾವಿ ಠಾಣೆ ಪೊಲೀಸರು ಮೃತದೇಹಗಳನ್ನು ಶವಗಾರಕ್ಕೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ