Breaking News
Home / ರಾಜಕೀಯ / ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಪುಟಾಣಿ ಸಹೋದರರು ಮೃತ್ಯು

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಪುಟಾಣಿ ಸಹೋದರರು ಮೃತ್ಯು

Spread the love

ವಿಜಯಪುರ, ಡಿ.4: ಅಣ್ಣ-ತಮ್ಮಂದಿರಾದ ಬಾಲಕರಿಬ್ಬರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ರಮೇಶ್(9) ಮತ್ತು ಮಾಳಿಂಗರಾಯ(11) ಮೃತಪಟ್ಟ ಬಾಲಕರಾಗಿದ್ದಾರೆ.

ಇವರಿಬ್ಬರು ಶನಿವಾರ ಶಾಲೆಯಿಂದ ಮನೆಗೆ ಬಂದ ಬಳಿಕ ದನಗಳನ್ನು ಮೇಯಿಸಲೆಂದು ತಮ್ಮ ಪಕ್ಕದ ಜಮೀನಿಗೆ ಹೋಗಿದ್ದರು. ಈ ವೇಳೆ ಅಲ್ಲಿರುವ ಕೃಷಿ ಹೊಂಡಕ್ಕೆ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆನ್ನಲಾಗಿದೆ.

ಈ ಬಗ್ಗೆ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ