Breaking News

ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರೋ ಸಾಹಸ ಮಾಡಿದರೇ ನಮ್ಮ ಅಧಿಕಾರಿಗಳು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆಂದು ಸಿಎಂ

Spread the love

ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರೋದು ಬೇಡಾ ಎಂದು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳ ಮೂಲಕ ಮಹಾರಾಷ್ಟ್ರದ ಕಾರ್ಯದರ್ಶಿಗಳಿಗೆ ಲಿಖಿತ ರೂಪದಲ್ಲಿ ತಿಳಿಸಲಾಗಿದೆ. ಅದಾಗ್ಯೂ ಅವರು ಬೆಳಗಾವಿಗೆ ಬರೋ ಸಾಹಸ ಮಾಡಿದರೇ ನಮ್ಮ ಅಧಿಕಾರಿಗಳು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರೋ ವಾತಾವರಣದಲ್ಲಿ ಬೆಳಗಾವಿಗೆ ಸಚಿವರು ಬರೋದು ಬೇಡಾ, ಇಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಆಗುತ್ತೆ. ಹೀಗಾಗಿ ಬರೋದು ಉಚಿತ ಅಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಆದರೂ ಅವರು ಬರ್ತೀನಿ ಅನ್ನೋದು ಸರಿಯಾದ ಕ್ರಮ ಅಲ್ಲ ಎಂದರು.

ಮಹಾರಾಷ್ಟ್ರ, ಕರ್ನಾಟಕ ಜನರ ನಡುವೆ ಸಾಮರಸ್ಯ ಇದೆ. ಇದೇ ಸಂದರ್ಭದಲ್ಲಿ ಗಡಿವಿವಾದ ಇದೆ. ಗಡಿವಿವಾದ ಕರ್ನಾಟಕದ ಪ್ರಕಾರ ಮುಗಿದು ಹೋಗಿರೋ ಅಧ್ಯಾಯ. ಆದ್ರೆ ಮಹಾರಾಷ್ಟ್ರ ಪದೇ ಪದೇ ಖ್ಯಾತೆ ತಗೆದು ,ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ಇಂತಹ ಸಂದರ್ಭಗಳಲ್ಲಿ ಮಹಾರಾಷ್ಟ್ರದ ಸಚಿವರು ರಾಜ್ಯಕ್ಕೆ ಬರೋ ಸಾಹಸ ಮಾಡಿದ್ದಾರೆ, ಅಧಿಕಾರಿಗಳು ಕ್ರಮ ಕೈಗೊಳ್ತಾರೆ. ನಾನು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಪ್ರತಿಭಂದಕ ಕಾಯ್ದೆ ಜಾರಿ ಮಾಡೋ ವಿಚಾರವಾಗಿ ಮಾತನಾಡಿದ ಸಿಎಂ, ಹಿಂದೆ ಈ ತರಹ ಆದಗೆಲ್ಲಾ ಸರ್ಕಾರ ಯಾವ ಕ್ರಮ ಕೈಗೊಂಡಿದೆ,ಅದೆಲ್ಲಾ ಕ್ರಮ ಕೈಗೊಳ್ತೀವಿ ಎಂದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ