Breaking News

ಕಾನೂನು ಉಲ್ಲಂಘನೆ ಮಾಡಿದರೆ ಮಹಾರಾಷ್ಟ್ರ ಸಚಿವರ ಮೇಲೂ ಕ್ರಮ: ಗೃಹ ಸಚಿವ

Spread the love

ಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು: ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಗೆ ಆಗಮಿಸುತ್ತಿರೋ ಮಹಾರಾಷ್ಟ್ರದ ಸಚಿವರ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಯಾರೇ ಕಾನೂನು ಉಲ್ಲಂಘನೆ ಮಾಡಿದರೂ ಅವರ ಮೇಲೆ ಕ್ರಮ ತಗೋತೀವಿ. ಅವರು ಸಚಿವರು ಆದರೂ ಬಿಡೋದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಸಿಎಂ ಅವರು ಇದರ ಬಗ್ಗೆ ಸಂಪೂರ್ಣವಾಗಿ ಹೇಳಿದ್ದಾರೆ. ನಮ್ಮ ರಾಜ್ಯ-ಮಹಾರಾಷ್ಟ್ರದ ಡಿಜಿಗಳು, ಎಡಿಜಿಪಿಗಳ ಸಭೆ ನಡೆದಿದೆ.

ಇದೀಗ ಭಾವನಾತ್ಮಕವಾಗಿ ಏನಾದರೂ ಕೆಣಕಲು ಬಂದರೆ ನಾವು ಬಿಡುವುದಿಲ್ಲ. ಈ ಬಗ್ಗೆ ಪೊಲೀಸರು ಎರಡು ಭಾಗದ ಜನರಿಗೆ ಎಚ್ಚರಿಕೆ ನೀಡಿದ್ದಾರೆಂದು ತಿಳಿಸಿದರು.ಕೋರ್ಟ್ ನಲ್ಲಿ ಪ್ರಕರಣವಿದೆ. ಹೀಗಿರುವಾಗ ಅನಾವಶ್ಯಕ ಗೊಂದಲ, ಶಾಂತಿ ಸುವ್ಯವಸ್ಥೆ ಹಾಳು ಮಾಡುವುದು ಸರಿಯಲ್ಲ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ