Breaking News

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್

Spread the love

ಹಾವೇರಿ : ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಎನ್ ಡಬ್ಲ್ಯೂ ಕೆಎಸ್ ಆರ್ ಟಿಸಿ ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುವುದು. ಖಾಸಗಿಯವರ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

 

ವಿಶೇಷ ಸಾರಿಗೆ ಸೌಲಭ್ಯ ಯೋಜನೆಯಡಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾರಂಭ ಹಾಗೂ ಮುಕ್ತಾಯದ ವೇಳೆ ಸಮಯಕ್ಕೆ ಸರಿಯಾಗಿ ನಿಗದಿತ ಮಾರ್ಗದಲ್ಲಿ ಬಸ್ ಓಡಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ