Breaking News

BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.

Spread the love

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ -ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

 

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಬಳಿ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜು (25), ಸೀನು (30) ಮತ್ತು ಜಯಪಾಲ (30) ಎಂದು ಗುರುತಿಸಲಾಗಿದ್ದು, ಶ್ರೀಕಾಂತ ಕರ್ನೂಲು ಎಂಬುವರಿಗೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಭತ್ತ ಕಟಾವು ಮಾಡಲು ಯಂತ್ರದ ಸಮೇತ ಮಸ್ಕಿಗೆ ಬಂದಿದ್ದ ನಾಲ್ವರು, ನಿನ್ನೆ ರಾತ್ರಿ ಗುಡದೂರಿಗೆ ಒಂದೇ ಬೈಕ್ ನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಯಡಿಯೂರಪ್ಪ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಮುಚ್ಚಿ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Spread the love ಯಡಿಯೂರಪ್ಪ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಮುಚ್ಚಿ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಅಲಾರವಾಡ ಅಂಡರ್‌ಬ್ರಿಡ್ಜ್ ಸರ್ಕಲ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ