Breaking News
Home / Uncategorized / ಇಂದು ಸಂಜೆ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರುವುದಾಗಿ ಸವಾಲು ಹಾಕಿದ ಶಿವಸೇನೆ

ಇಂದು ಸಂಜೆ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರುವುದಾಗಿ ಸವಾಲು ಹಾಕಿದ ಶಿವಸೇನೆ

Spread the love

ತಾವು ಇಂದು ಸಂಜೆ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರುವುದಾಗಿ ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಹೇಳಿಕೆ ನೀಡಿದ್ದಾರೆ.

 

ಬೆಳಗಾವಿ: ಗಡಿ ತಿಕ್ಕಾಟ ತೀವ್ರಗೊಂಡಿದೆ. ಇದರ ಮಧ್ಯೆ ಉರಿಯೋ ಬೆಂಕಿಗೆ ತುಪ್ಪ ಸುರಿಯಲು ಮುಂದಾದ ಮಹಾರಾಷ್ಟ್ರದ ಶಿವಸೇನೆ ಉದ್ಧವ್ ಠಾಕ್ರೆ ಬಣ ಇಂದು ಸಂಜೆ 5 ಗಂಟೆಗೆ ಬೆಳಗಾವಿಯ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರೋದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಸವಾಲು ಹಾಕಿದೆ.

ಮಹಾರಾಷ್ಟ್ರ ಸಚಿವರ ಬೆಳಗಾವಿ ಪ್ರವಾಸ ರದ್ದು ಮಾಡಿದ್ದರಿಂದ ಕ್ಯಾತೆ ತೆಗೆದಿರುವ ಉದ್ಧವ್ ಠಾಕ್ರೆ ಬಣದ ಮುಖಂಡ ಹಾಗೂ ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ, ಕರ್ನಾಟಕ ಗಡಿ ಪ್ರವೇಶಕ್ಕೆ ಮುಂದಾಗಿದ್ದಾರೆ. ಇವರ ಈ ಹೇಳಿಕೆಯು ಗಡಿ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆಗೆ ದಾರಿ ಮಾಡಿಕೊಟ್ಟಿದೆ.

 

ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ

 

ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವರು ಎರಡೂ ಬಾರಿ ಬೆಳಗಾವಿ ಪ್ರವಾಸ ರದ್ದು ಮಾಡಿದ್ದಾರೆ. ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವದ್ವಯರ ನಿಲುವು ಸಂಶಯಾಸ್ಪದವಾಗಿದೆ. ಹೀಗಾಗಿ ಸಂಜೆ 5 ಗಂಟೆಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್​ಗೆ ಬರುತ್ತೇವೆ. ಟೋಲ್‌ಗೇಟ್ ಬಳಿ ಬಂದು ತನ್ನ ನಿಲುವು ತಿಳಿಸುತ್ತೇವೆ ಎಂದಿದ್ದಾರೆ.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ