Breaking News

ತೀವ್ರಗೊಂಡ ಬೆಳಗಾವಿ ಗಡಿ ವಿವಾದ: ಪೊಲೀಸರ ಎಚ್ಚರಿಕೆ, ಕರ್ನಾಟಕಕ್ಕೆ ಬಸ್ಸು ಸಂಚಾರ ರದ್ದುಗೊಳಿಸಿದ ಮಹಾರಾಷ್ಟ್ರ

Spread the love

ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ.

 

ಪ್ರಯಾಣಿಕರು ಮತ್ತು ಬಸ್ಸಿನ ಸುರಕ್ಷತೆ ಮತ್ತು ಭದ್ರತೆಯನ್ನು ನೋಡಿಕೊಂಡು ಪೊಲೀಸರ ಜೊತೆ ಪರಿಶೀಲಿಸಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಬೆಳಗಾವಿಯಲ್ಲಿ ಮತ್ತು ಗಡಿಭಾಗದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿರುವುದರಿಂದ ಮಹಾರಾಷ್ಟ್ರದ ಬಸ್ಸುಗಳ ಮೇಲೆ ಕನ್ನಡಿಗರು, ಕನ್ನಡಪರ ಸಂಘಟನೆಗಳು ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಇಂದು ಈ ತೀರ್ಮಾನ ಕೈಗೊಂಡಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ