Breaking News

ವಿದ್ಯುತ್​ ಕಂಬಕ್ಕೆ ಬೈಕ್​ ಡಿಕ್ಕಿಯಾಗಿ ದೇಹ ಇಬ್ಭಾಗ: ಹುಟ್ಟುಹಬ್ಬದಂದೇ ಬಾಗಲಕೋಟೆ ಯುವಕ ದುರಂತ ಸಾವು, ಸ್ನೇಹಿತನೂ ಮೃತ್ಯು

Spread the love

ಬಾಗಲಕೋಟೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಹುಟ್ಟು ಹಬ್ಬದ ದಿನವೇ ಯುವಕನೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಗದ್ದನಕೇರಿ ತಾಂಡಾ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ನೇಹಿತನೂ ಮೃತಪಟ್ಟಿದ್ದಾನೆ.

ನವನಗರದ ಸಂಗಮೇಶ (21) ಹಾಗೂ ಶಿರಗುಪ್ಪಿ ತಾಂಡಾದ ಕಿರಣ (21) ಮೃತ ದುರ್ದೈವಿಗಳು.

ನಿನ್ನೆ (ಡಿ.6) ಸಂಗಮೇಶ್​ ಹುಟ್ಟುಹಬ್ಬವಿತ್ತು. ಹೀಗಾಗಿ ಹುಟ್ಟುಹಬ್ಬ ಆಚರಿಸಿಕೊಂಡು ಸ್ನೇಹಿತ ಕಿರಣ್​ ಜೊತೆ ಬೈಕ್​ನಲ್ಲಿ ಬರುವಾಗ ಭೀಕರ ಅಪಘಾತ ಸಂಭವಿಸಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಲ್ಲಿ ಒಬ್ಬನ ದೇಹ ತುಂಡರಿಸಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. 


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ