Breaking News

ವಿದ್ಯುತ್​ ಕಂಬಕ್ಕೆ ಬೈಕ್​ ಡಿಕ್ಕಿಯಾಗಿ ದೇಹ ಇಬ್ಭಾಗ: ಹುಟ್ಟುಹಬ್ಬದಂದೇ ಬಾಗಲಕೋಟೆ ಯುವಕ ದುರಂತ ಸಾವು, ಸ್ನೇಹಿತನೂ ಮೃತ್ಯು

Spread the love

ಬಾಗಲಕೋಟೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಹುಟ್ಟು ಹಬ್ಬದ ದಿನವೇ ಯುವಕನೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಗದ್ದನಕೇರಿ ತಾಂಡಾ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ನೇಹಿತನೂ ಮೃತಪಟ್ಟಿದ್ದಾನೆ.

ನವನಗರದ ಸಂಗಮೇಶ (21) ಹಾಗೂ ಶಿರಗುಪ್ಪಿ ತಾಂಡಾದ ಕಿರಣ (21) ಮೃತ ದುರ್ದೈವಿಗಳು.

ನಿನ್ನೆ (ಡಿ.6) ಸಂಗಮೇಶ್​ ಹುಟ್ಟುಹಬ್ಬವಿತ್ತು. ಹೀಗಾಗಿ ಹುಟ್ಟುಹಬ್ಬ ಆಚರಿಸಿಕೊಂಡು ಸ್ನೇಹಿತ ಕಿರಣ್​ ಜೊತೆ ಬೈಕ್​ನಲ್ಲಿ ಬರುವಾಗ ಭೀಕರ ಅಪಘಾತ ಸಂಭವಿಸಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಲ್ಲಿ ಒಬ್ಬನ ದೇಹ ತುಂಡರಿಸಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. 


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ